ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡೊನೇಷನ್ ಹಾವಳಿ ತಡೆಗಟ್ಟಲು ಎಸ್ ಎಫ್ ಐ ಜಿಲ್ಲಾ ಸಮಿತಿವತಿಯಿಂದ ಮನವಿ.

ಬೀದರ್:ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಂತ ಖಾಸಗಿ ಶಾಲೆಗಳು 2024-25 ನೇ ಸಾಲಿನ ಪ್ರವೇಶ ಶುಲ್ಕ,ಬಟ್ಟೆ,ಶೂ ಸಾಕ್ಸ್, ಟೈ,ಬೆಲ್ಟ್ ,ಸ್ಮಾರ್ಟ್ ಕ್ಲಾಸ್ ಶುಲ್ಕ,ಟ್ಯೂಷನ್ ಶುಲ್ಕವನ್ನು ಹೆಚ್ಚಿಗೆ ಮಾಡಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಬೀದರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಾ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಖಾಸಗಿ ಶಾಲೆಗಳು ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲಾ ತರಗತಿಯ ಪ್ರವೇಶಾತಿಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳ ಪಾಲಕರಿಂದ ಮನ ಬಂದಂತೆ ಡೊನೇಷನ್ ವಸೂಲಿಗೆ ಮುಂದಾಗಿವೆ.ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರು ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದಕೆ?
ಸರ್ಕಾರ ಇನ್ನೂ ಈ ವರ್ಷದ ಶೈಕ್ಷಣಿಕ ಪ್ರವೇಶಾತಿಯನ್ನು ಪ್ರಾರಂಭ ಮಾಡದಿದ್ದರೂ ಖಾಸಗಿ ಶಾಲೆಗಳು ತುದಿಕಾಲಲ್ಲಿ ನಿಂತು ಪ್ರವೇಶಾತಿ ಶುಲ್ಕ ಹಾಗೂ ಬಟ್ಟೆ ಶೂ,ಸಾಕ್ಸ ನೋಟ್ ಬುಕ್ಸ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನುಬಾಹಿರ.ಇಂತಹ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು 2024- 25 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಶುಲ್ಕದಲ್ಲಿ ಕೇವಲ ಬೋಧನಾ ಶುಲ್ಕ ಮಾತ್ರ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ.1983ರ ಶಿಕ್ಷಣ ಕಾಯಿದೆ ಎಲ್ಲಾ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ನೋಟಿಸ್ ಬೋರ್ಡ್ ಗೆ ಹಾಕಬೇಕು ಮತ್ತು ರೋಸ್ಟರ್ ಪ್ರಕಾರ ಸೀಟು ಹಾಗೂ ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಮುಂಭಾಗದಲ್ಲಿ ಪ್ಲೆಕ್ಸ್ ಹಾಕಬೇಕು ಎಂದು ನಿಯಮ ಇದ್ದರೂ ಜಿಲ್ಲೆಯ ಯಾವ ಶಾಲೆಗಳೂ ಸಹ ಹಾಕಿರುವುದಿಲ್ಲ ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ಜರುಗಿಸಲು ಮುಂದಾಗಿಲ್ಲ ಸರ್ಕಾರದ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಲು ಜಿಲ್ಲೆಯ ಬಿಇಒಗಳು ಪ್ರಕಟಿಸಿಲ್ಲ ಯಾಕೆ? ಖಾಸಗಿ ಶಾಲೆಗಳ ಜೊತೆ ಹೊಂದಾಣಿಕೆ ಆಗಿದ್ದಾರೆ ಎಂಬ ಪ್ರಶ್ನೆ ಬರುತ್ತದೆ.
ಆದ್ದರಿಂದ ಕೂಡಲೇ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೆಗುಲೇಟಿಂಗ್ ಪ್ರಾಧಿಕಾರ ರಚಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಹಾಗೂ ಸಂಘಟನೆಯ ಮುಖಂಡರನ್ನು ಒಳಗೊಂಡಂತೆ ಜಂಟಿ ಸಭೆ ಸೇರಬೇಕೆಂದು ಒತ್ತಾಯಿಸಿದರು.
ಬೇಡಿಕೆಗಳು:ಡೊನೇಶನ್ ಹಾವಳಿ ನಿಯಂತ್ರಣ ಮಾಡಬೇಕು,ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೆಗುಲೇಟಿಂಗ್ ಪ್ರಾಧಿಕಾರ ರಚಿಸಿ,ಸರ್ಕಾರದ ನಿಯಮ ಗಾಳಿಗೆ ತೂರಿದ ಶಾಲೆಗಳ ಮಾನ್ಯ ತೆ ರದ್ದು ಮಾಡಿ,ಅನಧಿಕೃತ ವಾಗಿ ಶಾಲೆಗಳ ಮಾನ್ಯತೆ ಇಲ್ಲದೆ ಐಸಿಐಸಿ/ಸಿಬಿಎಸ್ ಸಿ ನಡೆಸುವ ಶಾಲೆಗಳ ಮಾನ್ಯತೆ ರದ್ದುಗೊಳಿಸಿ,ಅಧಿಕೃತ ಶಾಲೆಗಳ ಕನ್ನಡ ಮಾಧ್ಯಮ/ ಇಂಗ್ಲಿಷ್ ಮಾಧ್ಯಮ ಶಾಲೆಗಳ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಇಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎ ಫ್.ಐ ಜಿಲ್ಲಾಧ್ಯಕ್ಷರಾದ ಅರುಣ ಕೊಡಗೆ,ಅಮರ ಗಾದಗಿ,ರೋಷನ್ ಮಲ್ಕಾಪೂರೆ ಇದ್ದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ