ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ವಾಸವಿ ಕನ್ಯಕಾ ಪರಮೇಶ್ವರಿಯವರ ಜಯಂತೋತ್ಸವ

ಬೀದರ್:ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಗರದ ಚೌಬಾರ ಹತ್ತಿರದ ಪಾಡುರಂಗ ಮಂದಿರದಲ್ಲಿ ಮೇ 18,ಶನಿವಾರ ರಂದು ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ಜಯಂತೋತ್ಸವ ಆಚರಿಸಲಾಗುತ್ತಿದೆ.ನಾಳೆ ಬೆಳಿಗ್ಗೆ 6:00 ಗಂಟೆಯಿಂದ ಅಭಿಷೇಕ,9:00 ಗಂಟೆಗೆ ಕುಂಕುಮಾರ್ಚನೆ, ಪುಷ್ಪಾರ್ಚನೆ ಮತ್ತು ಮಧ್ಯಾಹ್ನ 12:00 ಗಂಟೆಗೆ ತೊಟ್ಟಿಲು ಕಾರ್ಯಕ್ರಮ ನಡೆಯಲಿದೆ.ತದನಂತರ ಸಾಯಂಕಾಲ 5:00 ಗಂಟೆಗೆ ಭವ್ಯ ಮೆರವಣಿಗೆ ಕನ್ಯಕಾ ಪರಮೇಶ್ವರಿ ದೇವಸ್ಥಾನದಿಂದ ಬಸವೇಶ್ವರ ವೃತ್ತ,ಮಹಾವೀರ ವೃತ್ತ,ಅಂಬೇಡ್ಕರ್ ವೃತ್ತ,ಕ್ರಾಂತಿ ಗಣೇಶ,ವಿನಾಯಕ ವೃತ್ತ,ಮುಖ್ಯ ರಸ್ತೆ,ಚೌಬಾರ, ಮಾರ್ಗವಾಗಿ ಮತ್ತೆ ದೇವಸ್ಥಾನಕ್ಕೆ ತಲುಪಲಾಗುವುದು.
ಮದ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ಪ್ರಸಾದ ಹಾಗೂ ರಾತ್ರಿ 9 ಗಂಟೆಗೆ ಮಹಾ ಪ್ರಸಾದದ ವ್ಯವಸ್ಥೆ ಮಾಡಲಾಗುವುದು.
ಪ್ರಯುಕ್ತ ಸಮಸ್ತ ಸಮಾಜ ಬಾಂಧವರು ಈ ಜಯಂತೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಯಂತೊತ್ಸವ ಯಶಸ್ವಿಗೊಳಿಸಲು ಸಂಘದ ಅಧ್ಯಕ್ಷರಾದ ಡಿ.ವಿ.ಸಿಂದೋಲ,ಗೌರವ ಅಧ್ಯಕ್ಷ ಅಶೋಕ ರೆಜಂತಲ ಉಪಾಧ್ಯಕ್ಷರಾದ ದಿಗಂಬರ ಪೋಲಾ,ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ಪೊಲಾ,ಕಾರ್ಯದರ್ಶಿಗಳಾದ ಚಂದ್ರಶೇಖರ ಗಾದಾ,ವೆಂಕಟೇಶ ಪಿ.ಗಾಧಾ ಹಾಗೂ ಖಜಾಂಚಿಗಳಾದ ಸುನೀಲ ವಂಗಮಪಳ್ಳಿ ಅವರು ಜಂಟಿಯಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ