ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ಯಾರೆಂಟಿ ಯೋಜನೆಯ ಜಿಲ್ಲಾ ಉಪಾಧ್ಯಕ್ಷರಾಗಿ ಉದ್ದನೂರು ಸಿದ್ದರಾಜು ನೇಮಕ

ಚಾಮರಾಜನಗರ/ಹನೂರು:ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಉದ್ದುನೂರು ಸಿದ್ದರಾಜು ತಿಳಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಸುದ್ಧಿಗಾರರ ಜೊತೆ ಮಾತನಾಡಿದ ಅವರು
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಸುಮಾರು ಹನೂರು ಕ್ಷೇತ್ರದ ಧೀಮಂತ ನಾಯಕ ದಿವಂಗತ ರಾಜೂಗೌಡರ ಕಾಲದಿಂದಲು ಸಕ್ರಿಯವಾಗಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಪಕ್ಷದ ಕೆಲಸಗಳನ್ನು ಮಾಡುತ್ತಾ ಬಂದಿದ್ದೇನೆ ಅವರ ಕಾಲವಾದ ನಂತರ ಅವರ ಪುತ್ರ ನರೇಂದ್ರ ರಾಜೂಗೌಡ ಅವರ ಜೊತೆ ಮಾರ್ಗದರ್ಶನಲ್ಲಿ ಕೆಲಸ ಮಾಡುತ್ತ ಇದ್ದೀನಿ, ಅದರಂತೆ ವರಿಷ್ಠರು ಕರ್ನಾಟಕ ಜನತೆಯ ಬದುಕಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗೆ ನಮ್ಮ ಚಾಮರಾಜನಗರ ಜಿಲ್ಲೆಗೆ ಉಪಾಧ್ಯಕ್ಷರಾಗಿ ನೇಮಕಾ ಮಾಡಿದ್ದಾರೆ,ಇದು ನನಗೆ ಸಂತೋಷಕ್ಕಿಂತ ಜವಾಬ್ದಾರಿ ಹೆಚ್ಚು ಮಾಡಿದೆ ಆ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು,ಇದಕ್ಕೆಲ್ಲಾ ಕಾರಣ ಕರ್ತರು ನಮ್ಮ ಪಕ್ಷದ ಮಾಜಿ ಶಾಸಕರಾದ ಆರ್ ನರೇಂದ್ರ ರಾಜೂಗೌಡರು ಹಾಗೆಯೇ ಮುಖಂಡರು ಹಾಗೂ ಕಾರ್ಯಕರ್ತರು ಅವರ ಆಶೀರ್ವಾದದಿಂದಲೆ ನನಗೆ ಈ ಜವಾಬ್ದಾರಿ ಸಿಕ್ಕಿದೆ ಅವರಿಗೆಲ್ಲಾ ನಾನು ತುಂಬು ಹೃದಯದಿಂದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ