ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಕ್ಟೋಬರ್ 25 ರ ವರೆಗೆ ಅವಕಾಶ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಕುರಿತು

ಶಿವಮೊಗ್ಗ:ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಕ್ಟೋಬರ್ 25 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆ:
ಈಗಾಗಲೇ ಪದವಿ ಮುಗಿಸಿ ಮೂರು ವರ್ಷವನ್ನು ಪೂರ್ಣಗೊಳಿಸಿರುವ ಎಲ್ಲಾ ವ್ಯಕ್ತಿಗಳು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಅರ್ಹರಾಗಿರುತ್ತಾರೆ ಸಂಬಂಧಿಸಿದ ನಮೂನೆ ಮತ್ತು ಪದವಿಯ ಮೂರು ವರ್ಷದ ಅಂಕ ಪಟ್ಟಿಯನ್ನು ಗೆಜೆಟೆಡ್ ಅಧಿಕಾರಿಗಳಿಂದ ಮೇಲು ರುಜು ಹಾಕಿಸಿ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯ ತಾಲೂಕು ಕಚೇರಿಗೆ ನೀಡಿ ತಮ್ಮ ಹೆಸರು ಮತದಾರ ಪಟ್ಟಿಯಲ್ಲಿ ಬರುವಂತೆ ಎಲ್ಲರೂ ಕ್ರಮ ಕೈಗೊಳ್ಳುವುದು.
ತಾವು ಯಾವ ತಾಲೂಕು ಕಚೇರಿ ವ್ಯಾಪ್ತಿಗೆ ಒಳಪಡುತ್ತೀರೋ ಅಲ್ಲೇ ನೀಡಿ ತಮ್ಮ ತಮ್ಮ ಹೆಸರನ್ನು ಸೇರಿಸುವುದು.
ಈ ಪ್ರಕ್ರಿಯೆಯನ್ನು ಎಲ್ಲರೂ ಅಕ್ಟೋಬರ್ 25-2023ರ ಮೊದಲು ಪೂರ್ಣಗೊಳಿಸುವುದು.

ನೈರುತ್ಯ ಪದವೀಧರ ಕ್ಷೇತ್ರದ ಒಳಪಡುವ ಜಿಲ್ಲೆಗಳು:

ದಕ್ಷಿಣ ಕನ್ನಡ,ಉಡುಪಿ,ಶಿವಮೊಗ್ಗ,ಮಡಿಕೇರಿ, ಚಿಕ್ಕಮಗಳೂರು,ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚೆನ್ನಗಿರಿ ತಾಲೂಕು.

ವಿಶೇಷ ಸೂಚನೆ:ಪ್ರತಿ ಸಲದ ಚುನಾವಣೆಗೆ ಹೊಸದಾಗಿ ಹೆಸರನ್ನು ಮತ ಪಟ್ಟಿಗೆ ಸೇರಿಸುವುದು ಕಡ್ಡಾಯ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರೈಸಿದ ಎಲ್ಲಾ ಶಿಕ್ಷಕ ಬಂಧುಗಳು ಮತ್ತು ನಿಮ್ಮ ಪರಿಚಯದ ಪದವಿ ಪೂರೈಸಿದ ಅರ್ಹ ಪದವೀಧರರಿಗೆ ಮತ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದರ ಪದಾಧಿಕಾರಿಗಳು ವಿನಂತಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ