ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಶೀಲ್ದಾ‌ರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸನ್ಮಾನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕು॥.ಸಾಯಿನಾಗೇಶ್‌ಕಂಚಿ ತಂದೆ ಚನ್ನಪ್ಪಕಂಚಿ ಇವರು 2023-24 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರಟಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ಕೊಪ್ಪಳ ಜಿಲ್ಲೆಗೆ ಏಳನೇ ಸ್ಥಾನವನ್ನು (625/611 ಅಂಕ- 97.76%)ಪಡೆದು ಅಪಾರ ಕೀರ್ತಿಯನ್ನು ಶಾಲೆಗೆ ಹಾಗೂ ತಾಲ್ಲೂಕಿಗೆ ತಂದಿರುವ ಇವರಿಗೆ ತಾಲೂಕ ಆಡಳಿತ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನವನ್ನು ಮಾಡಲಾಯಿತು.
ಕಾರಟಗಿ ತಾಲೂಕಿನ ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಶ್ರೀಎಮ್.ಕುಮಾರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀವೆಂಕಟೇಶ ರಾಮಚಂದ್ರಪ್ಪ ಹಾಗೂ ಶಿಕ್ಷಣ ಸಂಯೋಜಕರಾದ ಶ್ರೀಟಿ.ಸಿ.ರಾಘವೇಂದ್ರ ರವರು,ಪ್ರಥಮ ಸ್ಥಾನ ಪಡೆದಿರುವ ಕು॥ಸಾಯಿನಾಗೇಶ್‌ಗೆ ಸನ್ಮಾನವನ್ನು ನೆರವೇರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕಿಗೆ ಪ್ರಥಮ ಸ್ಥಾನವನ್ನು ಹಾಗೂ ಶೇಕಡಾ 100% ಫಲಿತಾಂಶವನ್ನು ತರುವಲ್ಲಿ ಶ್ರಮಿಸಿದ ಕೇಂಬ್ರಿಡ್ಜ್ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಎಲ್ಲಾ ಶಿಕ್ಷಕರ ಪರವಾಗಿ ಶಾಲೆಯ ಕಾರ್ಯದರ್ಶಿಗಳು ಹಾಗೂ ಆಡಳಿತಾಧಿಕಾರಿಗಳಾದ ಶ್ರೀಮಲ್ಲಿಕಾರ್ಜುನ ಬಿಚ್ಚಗಲ್ ರವರಿಗೆ ತಹಶೀಲ್ದಾರ್‌ರು, ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಣ ಸಂಯೋಜಕರು ಸನ್ಮಾನವನ್ನು ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯರಾದ ಶ್ರೀ ಡ್ಯಾನಿಯಲ್,ಉಪ ಪ್ರಾಚಾರ್ಯರಾದ ಶ್ರೀಮತಿ ಸೌಮ್ಯಶ್ರೀ ಎಸ್.ಪಿ,ಅಕೌಂಟೆಂಟ್ ಶ್ರೀ ಬಸವರಾಜ ಯರಡೋಣ,ಶಿಕ್ಷಕರಾದ ಕು.ಮೇಘಾದಿವಟರ್ ಮತ್ತು ದೈ.ಶಿ. ಶ್ರೀ ಸಂಗಮೇಶ ಪಾಲಕರಾದ ಶ್ರೀ ಚನ್ನಪ್ಪ ಕಂಚಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ