ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನ ಅಧಿಕಾರಿಗಳ ವಶಕ್ಕೆ,ಪ್ರಕರಣ ದಾಖಲು

ಬಳ್ಳಾರಿ/ಸಿರುಗುಪ್ಪ.ಮೇ-21:ಖಚಿತ ಮಾಹಿತಿಯ ಮೇರೆಗೆ ತಾಲೂಕಿನ ಕೆಂಚನಗುಡ್ಡ ಗ್ರಾಮದಿಂದ ಸಿರುಗುಪ್ಪ ನಗರ ಮಾರ್ಗವಾಗಿ ಇಬ್ರಾಂಪುರ ಗ್ರಾಮದ ಕಡೆಗೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಆಹಾರ ನಿರೀಕ್ಷಕ ಟಿ ಮಹೇಶ್ ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ ಬಾತ್ಮಿದಾರರಿಂದ ಖಚಿತ ಮಾಹಿತಿ ಬಂದಿದ್ದು ಹಳೇ ಕೆಂಚನಗುಡ್ಡ ರಸ್ತೆಯಿಂದ ಸಿರುಗುಪ್ಪ ನಗರದ ಮುಖಾಂತರ ಇಬ್ರಾಂಪುರ ಗ್ರಾಮದ ಕಡೆಗೆ ಕೆ ಎ 34 ಸಿ 1964 ಆಶೋಕ ಲೈಲ್ಯಾಂಡ್ ಲಗೇಜ್ ಆಟೋದಲ್ಲಿ ಇಬ್ರಾಂಪುರ ಗ್ರಾಮ ವಾಸಿ 33ವರ್ಷದ ಮಲ್ಲಿಕಾರ್ಜುನ ಅಕ್ರಮವಾಗಿ ನಲವತ್ತು ಕ್ವಿಂಟಲ್ ತೂಕದ,ಒಂದು ಲಕ್ಷದ ಹದಿನಾರು ಸಾವಿರ ಮೌಲ್ಯದ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಜಪ್ತಿ ಮಾಡಲಾಗಿದೆ.ಸದರಿ ಅಕ್ಕಿಯು ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಣೆಯಾಗುವ ಪಡಿತರ ಅಕ್ಕಿಯಾಗಿದ್ದು ಇವುಗಳನ್ನು ಅಕ್ರಮ ಸಾಗಾಣಿಕೆ ಮಾಡುತ್ತಿದ್ದು ಸದರಿ ಕೃತ್ಯದ ವಿರುದ್ಧ ಕರ್ನಾಟಕ ಅಗತ್ಯ ವಸ್ತುಗಳ (ಸಾರ್ವಜನಿಕ ವಿತರಣಾ ಪದ್ಧತಿ) ನಿಯಂತ್ರಣ ಆದೇಶದಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ
ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ