ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರಿಂದ ಪತ್ರಿಕಾ ಹೇಳಿಕೆ

ಶಿವಮೊಗ್ಗ:ಗ್ಯಾರೆಂಟಿ ಎಂಬ ಕಳೆದ ಒಂದು ವರ್ಷದಿಂದ ಕರ್ನಾಟಕವನ್ನು ಲೂಟಿ ಮಾಡಿಕೊಂಡು ಬಂದಿರುವ ATM ಕಾಂಗ್ರೆಸ್ ಸರ್ಕಾರ,ಲೂಟಿಯ ಜೊತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯಲು ಆರಂಭಿಸಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಅಸಲಿ ಸಾಧನೆಯಾಗಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಪತ್ರಿಕಾ ಹೇಳಿಕೆಯಲ್ಲಿ ಇಂದು ಆಪಾದಿಸಿದರು.

ಈಗಾಗಲೇ ಕರ್ನಾಟಕದ ಆರ್ಥಿಕತೆಯನ್ನು ದಿವಾಳಿಯನ್ನಾಗಿಸಿ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್,ಹಗರಣಗಳನ್ನೇ ತಮ್ಮ ಹೊಸ ಗ್ಯಾರಂಟಿ ಎಂದು ಸಾರಿ ಸಾರಿ ಹೇಳಲು ಪ್ರಾರಂಭಿಸಿದೆ.ಇದಕ್ಕೆ ಹೊಸ ಉದಾಹರಣೆ ಎಂಬಂತೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಸುಮಾರು 80-85 ಕೋಟಿ ರೂ.ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿರುವುದರ ಜೊತೆಗೆ ಈ ಹಗರಣದಲ್ಲಿ ಪರಿಶಿಷ್ಟ ಕಲ್ಯಾಣ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ.
ಹಗರಣದ ಪ್ರಮುಖ ರೂವಾರಿ ಆಗಿರುವ ಸಚಿವ ಬಿ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಸಿದ್ದರಾಮಯ್ಯ ಅವರು ತಮ್ಮ ಆಪ್ತರೆಂದು ರಕ್ಷಣೆ ಮಾಡುವ ಬದಲು ಕಾನೂನು ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ