ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರಣ್ಯ ಅಧಿಕಾರಿ ರುದ್ರಮುನಿ ಅವರ ಕಾರ್ಯ ಶ್ಲಾಘನೀಯ:ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು

ರಾಯಚೂರು ಜಿಲ್ಲೆಯ ಸಿಂಧನೂರಿನ ಕರಿಬಸವ ನಗರದ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ರಂಭಾಪುರಿ ಶಾಖಾಮಠ ಅವರು ಸಿಂಧನೂರು ಅರಣ್ಯ ಇಲಾಖೆಗೆ ಭೇಟಿ ನೀಡಿ ಈ ಬಾರಿ ಸಾರ್ವಜನಿಕರಿಗೆ ಹಾಗೂ ವನಸಿರಿ ಫೌಂಡೇಶನ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳಿಗೆ ವಿತರಿಸುವ ಸಸಿಗಳನ್ನು ಬೆಳಸಿರುವುದನ್ನು ನೋಡಿ ತುಂಬಾ ಸಂತೋಷಗೊಂಡು ಇಲಾಖೆಯ ಅಧಿಕಾರಿಗಳಾದ ರುದ್ರಮುನಿ ಅವರಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕರಿಬಸವ ನಗರದ ರಂಭಾಪುರಿ ಶಾಖಾ ಮಠದ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಸಿಂದನೂರು ಹಸಿರುಮಯವಾಗಿ ಕಂಗೋಳಿಸುತ್ತಿರುವುದಕ್ಕೆ ಅತ್ಯಂತ ಪ್ರಮುಖರು ಎಂದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು.ಇಲ್ಲಿನ ಸಸಿಗಳನ್ನು ಬೆಳಸುತ್ತಿರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗುತ್ತಿದೆ.ಸಿಂಧನೂರಿನಲ್ಲಿ ವನಸಿರಿ ಫೌಂಡೇಶನ್ ಹಾಗೂ ಇನ್ನಿತರ ಹಲವಾರು ಸಂಘಸಂಸ್ಥೆಗಳಿಗೆ ವಿವಿಧ ರೀತಿಯ ಸಸಿಗಳನ್ನು ವಿತರಿಸುವ ಅರಣ್ಯ ಇಲಾಖೆಯ ಕಾರ್ಯ ತುಂಬಾ ಶ್ಲಾಘನೀಯ.ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿದಿನ ಸಸಿಗಳನ್ನು ಬೆಳೆಸಿ ಪರಿಸರ ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ.ಅರಣ್ಯ ಇಲಾಖೆಯ ಮಾರ್ಗದರ್ಶನ ಸಹಕಾರದಿಂದ ಇಂದು ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದ ವನಸಿರಿ ಫೌಂಡೇಶನ್ ತಂಡ ಇಂದು ರಾಜ್ಯ ಮಟ್ಟದ ಪ್ರಶಸ್ತಿ ಪಡೆಯಲು ಸಾಧ್ಯವಾಯಿತು.ಇದರಿಂದ ವನಸಿರಿ ಫೌಂಡೇಶನ್ ರಾಜ್ಯಕ್ಕೆ ಮಾದರಿಯಾಗಿದೆ.ಇಂತಹ ಕಾರ್ಯಗಳು ಇನ್ನೂ ಹೆಚ್ಚಿನ ರೀತಿಯಲಿ ಸಾಗಲಿ ಪರಿಸರ ಸುಂದರವಾಗಿ ಬೆಳದರೆ ನಾವುಗಳೆಲ್ಲರೂ ಆರೋಗ್ಯದಿಂದಿರಲು ಸಾದ್ಯ ಪರಿಸರವನ್ನು ಉಳಿಸಿ ಬೆಳಸಲು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಮರೇಗೌಡ ಮಲ್ಲಾಪೂರ,ವೀರೇಶ ಸಾನಬಾಳ ಉದ್ಯಮಿಗಳು,ಅರಣ್ಯ ಇಲಾಖೆಯ ಅಧಿಕಾರಿ ರುದ್ರಮುನಿ ಹಾಗೂ ಸಿಬ್ಬಂದಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ