ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಡಗೇರಾದಲ್ಲಿ ತಾಲೂಕು ಕಚೇರಿಗಳ ಆರಂಭಿಸಲು. ಅಬ್ದುಲ್ ಚಿಗಾನೂರ ಒತ್ತಾಯ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರವಾಗಿ ಸುಮಾರು ವರ್ಷಗಳು ಕಳೆದರೂ ಕೂಡಾ ವಡಗೇರಾ ತಾಲೂಕು ಕೇಂದ್ರದಲ್ಲಿ ತಾಲೂಕು ಕಚೇರಿಗಳ ಆರಂಭ ಮಾಡದಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕು ಕೇಂದ್ರ ಎಂದು ಘೋಷಣೆಯಾಗಿ ಸುಮಾರು ವರ್ಷಗಳು ಕಳೆದಿವೆ ಇಲ್ಲಿಯವರೆಗೆ ತಾಲೂಕಿಗೆ ಸಂಬಂಧಿಸಿದ ಕಚೇರಿಗಳನ್ನು ತೆರಿಯದೆ ಸಾರ್ವಜನಿಕರ ಕಣ್ಣಿಗೆ ಮಣ್ಣೆರೆಚುತ್ತಿರುವುದು ಸರಿಯಲ್ಲ ಈ ಭಾಗದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಶಹಾಪೂರಕ್ಕೆ ತೆರಳಬೇಕು ಇದರಿಂದ ತಾಲೂಕಿನ ದೂರದ ಗ್ರಾಮೀಣ ಪ್ರದೇಶದ ರೈತರು ವಿದ್ಯಾರ್ಥಿಗಳಿಗೂ ಸಾರ್ವಜನಿಕರಿಗೂ ತುಂಬಾ ತೊಂದರೆಯಾಗುತ್ತಿದೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಹಲವಾರು ಬಾರಿ ಹೋರಾಟ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಕೂಡಲೇ ತಾಲೂಕಿಗೆ ಸಂಬಂಧಿಸಿದ ಕಚೇರಿಗಳನ್ನು ತೇರಿಯಬೇಕು ಎಂದು ಒತ್ತಾಯಿಸಿದ್ದಾರೆ.ಒಂದು ವೇಳೆ ವಿಳಂಬ ಮಾಡಿದ್ದಲ್ಲಿ ನಮ್ಮ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಉಗ್ರ ಹೋರಾಟ ಮಾಡುವುದಾಗಿ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ಹಾಗೂ ಸಿದ್ದು ತುಮಕೂರ,ಶರಣು ಗೊಂದೆನೂರ,ಮಲ್ಲು ಜಡಿ, ದೇವು ಬೂಸೇನಿ,ಸತೀಶ್ ಜಡಿ,ಶ್ರೀನಿವಾಸ್ ಮಡಿವಾಳ,ಪೀರ್ ಸಾಬ್ ಮರಡಿ,ಬಸವರಾಜ್ ಬೂಸೇನಿ,ಮಹಮ್ಮದ್ ಕತಾಲಿ,ಬಸವರಾಜ್ ಕೊದ್ದಡ್ಡಿ,ಸುರೇಶ್ ಬಾಡದ,ಸಾಹೇಬರೆಡ್ಡಿ ಹೊರಟುರು ಹಾಗೂ ಇನ್ನಿತರರು ಸರಕಾರಕ್ಕೆ ಎಚ್ಚರಿಸಿದ್ದಾರೆ.

ವರದಿ:ಶಿವರಾಜ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ