ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೃಹತ್ ನೇತ್ರ ಶಸ್ತ್ರಚಿಕಿತ್ಸೆ:ಡಾ||ಯಲ್ಲಪ್ಪ ಪಾಟೀಲ್ ಹುಲ್ಕಲ್

ಶಹಾಪುರ:ಜೂನ್ 1 ಮತ್ತು 2 ರಂದು ಶಹಾಪುರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಯಾದಗಿರಿ,ತಾಲೂಕು ಆರೋಗ್ಯ ಇಲಾಖೆ ಶಹಪುರ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು,350 ರಿಂದ 500 ಜನರ ನೇತ್ರ ಶಸ್ತ್ರ ಶಸ್ತ್ರಚಿಕಿತ್ಸೆಯ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ಡಾ.ಯಲ್ಲಪ್ಪ ಹುಲ್ಕಲ್ ತಿಳಿಸಿದ್ದಾರೆ.

ಜನಹಿತ ಐಕೇರ್ ಸೆಂಟರ್ ಬೆಂಗಳೂರು-ಹಿಂದೂಪುರವತಿಯಿಂದ ಡಾ.ಕೃಷ್ಣ ಮೋಹನ್ ಜಿಂಕಾ ಅವರ ತಂಡದಿಂದ ಎರಡು ದಿನಗಳ ಕಾಲ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು,ಈ ತಂಡದವರು 2008ರಿಂದ ಇದುವರೆಗೆ ಒಂದು ಲಕ್ಷಕ್ಕೂ ಮೇಲ್ಪಟ್ಟ ನೇತ್ರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮಾಡಿದ್ದಾರೆ.ನೇತ್ರ ಚಿಕಿತ್ಸೆಯು ಉಚಿತವಾಗಿರುತ್ತದೆ. ಸಾರ್ವಜನಿಕರು ಮತ್ತು ತಾಲೂಕಿನ ಸುತ್ತಲಿನ ಗ್ರಾಮಸ್ಥರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು.
ನೇತ್ರ ಶಸ್ತ್ರ ಚಿಕಿತ್ಸೆಗೆ ಒಳಪಡುವವರ ಪಟ್ಟಿ ಈಗಾಗಲೇ ಸಿದ್ಧವಿದ್ದು ಇನ್ನೂ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಇಚ್ಛಿಸುವವರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೇತ್ರಾಧಿಕಾರಿಗಳನ್ನು ಸಂಪರ್ಕಿಸಬಹುದು.ರೋಗಿಯನ್ನು ಪರಿಶೀಲಿಸಿ ಶಸ್ತ್ರ ಚಿಕಿತ್ಸೆಗೆ ಅರ್ಹನಿದ್ದಾನೆ ಎಂದು ಪರಿಶೀಲಿಸಿದ ನಂತರ ನೋಂದಾಯಿಸಿಕೊಳ್ಳಲಾಗುವುದು.ನೇತ್ರ ಶಸ್ತ್ರ ಚಿಕಿತ್ಸೆಯ ದಿನ ಬಿಪಿ,ಶುಗರ್ ಗಳನ್ನು ಟೆಸ್ಟ್ ಮಾಡಿಸಲಾಗುವುದು.ನಂತರ ಶಸ್ತ್ರ ಚಿಕಿತ್ಸೆಗೆ ಅರ್ಹ ಎನ್ನುವ ಬಗ್ಗೆ ಪರಿಶೀಲಿಸಲಾಗುವುದು.
ಫಲಾನುಭವಿಗಳು ಶಿಬಿರಕ್ಕೆ ಬರುವಾಗ ಸ್ನಾನ ಮಾಡಿಕೊಂಡು ಶುದ್ಧ ಬಟ್ಟೆಗಳನ್ನು ಧರಿಸಿಕೊಂಡು ಬರಬೇಕು.ಬರುವಾಗ ಆಧಾರ ಕಾರ್ಡ್,ಚುನಾವಣೆ ಕಾರ್ಡ್,ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ತರಬೇಕು,ಆಧಾರ್ ಕಾರ್ಡ್ ಮೊಬೈಲ್ ನಂಬರ್ ಲಿಂಕ್ ಇರಬೇಕು.ಒಬ್ಬ ರೋಗಿಯ ಜೊತೆಗೆ ಇನ್ನೊಬ್ಬರಿಗೆ ಅವಕಾಶ ಕಲ್ಪಿಸಲಾಗುವುದು.
ಶಸ್ತ್ರಚಿಕಿತ್ಸೆಗೆ ಬರುವವರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಊಟದ ವ್ಯವಸ್ಥೆ ಮಾಡಲಾಗಿದ್ದು,ಶಿವಣ್ಣ ತಣಿಕೆದಾರ್,ಕವಿತಾ ಟೆಂಟ್ ಹೌಸ್ ವಾಲ್ಮೀಕಿ ಚೌಕ್ ಹಳಿಸಗರ ರವರಿಂದ ಟೆಂಟ್ ವ್ಯವಸ್ಥೆ ಮಾಡಲಿದ್ದಾರೆ.ಶಹಾಪುರ ಮಾರ್ಟ್ ಮಾಲ್ ರವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.ಸಾರ್ವಜನಿಕ ಗರ್ಭಿಣಿಯರ ಹಿತದೃಷ್ಟಿಯಿಂದ ತುರ್ತು ಸಮಯದಲ್ಲಿ ಗರ್ಭಿಣಿಯರು ಸಿಜರೀಯನ್ ಶಸ್ತ್ರಚಿಕಿತ್ಸೆಗೆ ಯಾವುದೇ ರೀತಿಯಲ್ಲಿ ಅಡೆತಡೆಯಾಗದಂತೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೇತ್ರಾಧಿಕಾರಿ ಬಸವರಾಜ 9900585784,ಸಂಗಣ್ಣ ನುಚ್ಚಿನ್ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ 9980776967, ಮಂಜುನಾಥ 9686857989 ಇವರನ್ನು ಸಂಪರ್ಕಿಸಬಹುದು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ