ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೌರ್ಜನ್ಯವಾಗಿ ಅನಾಥೆಯ ಮನೆ ನೆಲಸಮ,ಅಧಿಕಾರಿಗಳ ವಿರುದ್ದ ಭೋವಿ ಸಂಘ ಆಕ್ರೋಶ….!

ಬಾಗೇಪಲ್ಲಿ:ಅನಾಥೆಯ ಮನೆ ನೆಲೆಸಮ ಮಾಡಿ 5 ದಿನಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆಂದು ಭೋವಿ ಸಂಘದ ಜಿಲ್ಲಾಧ್ಯಕ್ಷ ಪಿ.ಡಿ.ವೆಂಕಟರಾಮ್ ಆರೋಪಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 1987ರಲ್ಲಿ ಪಟ್ಟಣದ 1ನೇ ವಾರ್ಡ್‍ನಲ್ಲಿ ಸರ್ವೆ ನಂ 156ರಲ್ಲಿ ಅರ್ಧ ಗುಂಟೆ ಜಾಗವನ್ನು ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮದ ವಡ್ಡರ ನಾರಾಯಣಪ್ಪ ಎಂಬುವವರು ಎದುಲನ್ನ ಚಿನ್ನವೆಂಕಟಸ್ವಾಮಿ ರವರಿಂದ ಖರೀದಿ ಮಾಡಿ ಕಲ್ಲು ಬಂಡೆಗಳ ಮನೆ ನಿರ್ಮಿಸಿಕೊಂಡು ಕಳೆದ 40 ವರ್ಷಗಳಿಂದ ಈ ಮನೆಯಲ್ಲಿ ವಾಸವಾಗಿದ್ದರು.ನಾರಾಯಣಪ್ಪ ಮತ್ತು ವೆಂಕಟಲಕ್ಷ್ಮಮ್ಮ ರವರು ಮೃತಪಟ್ಟಿದ್ದು ಇವರಿಗೆ ಅಮೃತ ಎಂಬ ಮೊಮ್ಮಗಳು ಇದ್ದಾರೆ.ಅಮೃತ ರವರ ತಂದೆ ತಾಯಿ ಸಹ ಮೃತಪಟ್ಟಿದ್ದಾರೆ ಸದ್ಯಕ್ಕೆ ಇವರು ತನ್ನ ಸೋದರತ್ತೆ ರತ್ನಮ್ಮ ಎಂಬುವರ ಆಶ್ರಯದಲ್ಲಿ ಇದೇ ಮನೆಯಲ್ಲಿ ವಾಸವಾಗಿದ್ದಾರೆ.ಈ ಅನಾಥ ಹೆಣ್ಣು ಮಗು 10ನೇ ತರಗತಿ ಉತ್ತೀರ್ಣಳಾಗಿದ್ದಾಳೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ