ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಡೋಣೂರ ಶಾಲಾ ಪ್ರಾರಂಭೋತ್ಸವ

ವಿಜಯಪುರ:ದಿ:31/05/2024 ರ ಶುಕ್ರವಾರದಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಡೋಣೂರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ಶ್ರೀ ವಸಂತ ರಾಠೋಡರವರು ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಹಾಗೂ ಡಿಕ್ಷನರಿಗಳನ್ನು ವಿತರಿಸುವುದರ ಮೂಲಕ ಶಾಲಾ ಚಟುವಟಿಕೆಗಳಿಗೆ ಚಾಲನೆ ನೀಡಿದರು.
ಶಾಲೆಯ ಸಮಸ್ಯೆಗಳ ಕುರಿತು ಚರ್ಚಿಸಿ ಎರಡು ತರಗತಿ ಕೊಠಡಿಗಳನ್ನು ಮಂಜೂರು ಮಾಡಿದ್ದು ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಎರಡು ಕೊಠಡಿಗಳನ್ನು ನೀಡುವುದಾಗಿ ತಿಳಿಸಿದರು.
ಶಾಲೆಗೆ ಕಾಯ್ದಿರಿಸಿದ ಸ್ಥಳದಲ್ಲಿ ಮುಳ್ಳುಗಿಡಗಳು ಬೆಳೆದಿದ್ದು ಅವುಗಳನ್ನ ಸ್ವಚ್ಚಗೊಳಿಸಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನ ನೀಡುವಂತೆ ಗ್ರಾಮ ಪಂಚಾಯತಿಗೆ ಮನವಿ ಮಾಡುವಂತೆ ಸೂಚಿಸಿದರು. ನಂತರ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಇರದ ಕಾರಣ ಬೇಗ ಬಿಸಿಯೂಟದ ಅಧಿಕಾರಿಗಳಿಗೆ ವರದಿನೀಡಿ ಅನುಮತಿ ಪಡೆದು ಸದ್ಯದಲ್ಲಿ ಅಡುಗೆ ಪ್ರಾರಂಭಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಸಿ.ಆರ್.ಪಿ ಗಳಾದ ಶ್ರೀ ಎಚ್ ಎಸ್ ಡೊಮನಾಳ,ಎಸ್ ಡಿ ಎಂ ಸಿ ಸದಸ್ಯರಾದ ಶ್ರೀಮಂತ ನಡಗೇರಿ ˌ ಶಾಲೆಯ ಮುಖ್ಯಗುರುಗಳು ಸಿಬ್ಬಂದಿವರ್ಗ ಹಾಗೂ ಊರಿನ ಹಿರಿಯರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ