ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರದ ವಿರುದ್ಧ ಅಮರನಾಥ ಮಧುರಕರ ಕೆಂಡಾಮಂಡಲ

ಕಲಬುರಗಿ/ಜೇವರ್ಗಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಾಗಿನಿಂದ ರಾಜ್ಯದಲ್ಲಿ 800 ಕೋಟಿ ಹೈನುಗಾರಿಕೆ ಅನುದಾನ ಬಿಡುಗಡೆ ಮಾಡದೆ ಸರ್ಕಾರ ರೈತರನ್ನು ದಿವಾಳಿಯನ್ನಾಗಿ ಮಾಡಿದ್ದು ರಾಜ್ಯದ ಜನತೆಗೆ ಗೊತ್ತೇ ಇದೆ.ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಸರಕಾರದ ಶೂನ್ಯ ಸಾಧನೆಯ ಬಗ್ಗೆ ಜನಸಾಮಾನ್ಯರಿಂದ ಹಿಡಿದು ಎಲ್ಲರೂ ಹಿಡೀ ಶಾಪ ಹಾಕುತ್ತಿದ್ದಾರೆ ಮಹಿಳಾ ಸಬಲೀಕರಣಕ್ಕಾಗಿ ಅಂದಿನ ರಾಜ್ಯ ಸರ್ಕಾರದ ಕೋಟಾ ಶ್ರೀನಿವಾಸ್ ಪೂಜಾರಿ ಸಮಾಜ ಕಲ್ಯಾಣ ಇಲಾಖೆಯ ಸಚಿವರ ನೇತೃತ್ವದಲ್ಲಿ ಅನುದಾನ ಬಿಡುಗಡೆ ಮಾಡಿತ್ತು ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮೊರಾರ್ಜಿ ವಸತಿ ಶಾಲೆಗಳ ಕರಾಟೆ ತರಬೇತಿ ಅನುದಾನವನ್ನು ಬಿಡುಗಡೆ ಮಾಡದೆ ಉಚಿತ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನರಿಗೆ ಮಂಕು ಬೂದಿ ಎರಚಿದೆ ಮುಂದೆ ಬರುವಂತಹ ದಿನಗಳಲ್ಲಿ ನಾಡಿನ ಜನರು ಈ ಸರ್ಕಾರಕ್ಕೆ ತಕ್ಕ ಬುದ್ಧಿಯನ್ನೆ ಕಲಿಸಲಿದ್ದಾರೆ ಎಂದು ಪ್ರಗತಿಪರ ಚಿಂತಕ ಜೇವರ್ಗಿ ತಾಲೂಕ ಖ್ಯಾತ ಕರಾಟೆ ಶಿಕ್ಷಕರಾದ ಅಮರನಾಥ್ ಮಧುರಕರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ