ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಲಸು ಸಂಸ್ಕರಣೆ ತರಬೇತಿ ಶಿಬಿರ

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ- ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ರೈತರ ತರಬೇತಿ ಸಂಸ್ಥೆ ಮತ್ತು ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ -ಆನಂದಪುರ, ಇವರ ಸಂಯುಕ್ತ ಆಶ್ರಯದಲ್ಲಿ ಇದೇ ತಿಂಗಳ ಜೂನ್ 10 ನೇ (ಸೋಮವಾರ) ತಾರೀಖಿನಂದು “ಬಹುಪಯೋಗಿ ಹಲಸು: ಸಂಸ್ಕರಣೆ ಮತ್ತು ಮೌಲ್ಯವರ್ಧನೆ” ಯ ಬಗ್ಗೆ ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ವನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಇರುವಕ್ಕಿಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.
ಒಂದು ಋತುವಿಗೆ ಅಷ್ಟೇ ಸೀಮಿತವಾದ ಹಲಸಿನ ಹಣ್ಣನ್ನು ಹೇಗೆ ನಾವು ವರ್ಷಪೂರ್ತಿ ಸಂಸ್ಕರಣೆ ಮಾಡಿ ಬಳಸಿಕೊಳ್ಳಬಹುದು ಹಾಗೂ ಅದರ ಖಾದ್ಯಗಳನ್ನು ಎಲ್ಲಾ ಋತುಗಳಲ್ಲಿಯೂ ಸವಿಯಬಹುದೆಂದು ತಿಳಿಸಿಕೊಡಲು ಈ ಕಾರ್ಯಕ್ರಮದ ವಿಶೇಷತೆಯಾಗಿರುವ ಹಲಸಿನ ನೂತನ ಸಂಸ್ಕರಣ ವಿಧಾನಗಳು, ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಹಲಸಿನ ವೈವಿಧ್ಯಮಯ ಖಾದ್ಯಗಳ ತಯಾರಿಕೆ ಹಾಗೂ ಅವುಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ಎಫ್ ಎಸ್ ಎಸ್ ಎ ಐ ಪರವಾನಗಿ, ಬ್ರಾಂಡಿಂಗ್ ಮತ್ತು ಲೈಸೆನ್ಸ್ ಸಿಂಗ್ ಗಳ ಬಗ್ಗೆ ಸಿಗಲಿರುವ ಮಾಹಿತಿಯನ್ನು ಪಡೆಯಲು ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸುತ್ತೇವೆ.
ತರಬೇತಿಗಾಗಿ ನೋಂದಾಯಿಸಲು ಸಂಪರ್ಕಿಸಿ ಡಾ. ಸುಧಾರಾಣಿ, ಏನ್. (ಆಹಾರ ತಜ್ಞರು), ಕೃಷಿ ವಿಜ್ಞಾನ ಕೇಂದ್ರ – ಶಿವಮೊಗ್ಗ, ಮೊಬೈಲ್ ಸಂಖ್ಯೆ: 9482024908

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!