ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಂದಿ ಪಬ್ಲಿಕ್ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ರಾಯಚೂರು ಜಿಲ್ಲೆಯ ಮಸ್ಕಿ ನಗರದ ನಂದಿ ಪಬ್ಲಿಕ್ ಶಾಲೆಯಲ್ಲಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ಶರಣೇಗೌಡ ಪಾಟೀಲ ಸಸಿ ನೆಟ್ಟು ನೀರುಣಿಸಿ ಮಾತನಾಡಿ
ನಗರೀಕರದಿಂದ ಮನುಷ್ಯ ಗಿಡಮರಗಳನ್ನು ಹೆಚ್ಚು ಹೆಚ್ಚು ಕಡಿಯುತ್ತಿದ್ದಾನೆ.ಗಿಡಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಇದರಿಂದ ಜಾಗತಿಕ ತಾಪಮಾನದಲ್ಲಿ ಏರುಪೇರಗಳಾಗುತ್ತಿವೆ.ಜಾಗತಿಕ ತಾಪಮಾನದ ಪ್ರಕಾರ ನಾವುಗಳೆಲ್ಲರೂ 10ಲಕ್ಷಕ್ಕೂ ಹೆಚ್ಚು ಗಿಡಮರಗಳನ್ನು ಬೆಳಸಬೇಕಾಗಿದೆ.ಈ ನಿಟ್ಟಿನಲ್ಲಿ ವನಸಿರಿ ಫೌಂಡೇಶನ್ ಪ್ರತಿನಿತ್ಯ ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ.ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು,ಪರಿಸರ ಪ್ರೇಮಿಗಳು ವನಸಿರಿ ಫೌಂಡೇಶನ್ ಜೊತೆಗೆ ಕೈಜೋಡಿಸಿ ಪರಿಸರವನ್ನು ಉಳಿಸಿ ಬೆಳಸಲು ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಸ್ಕಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ಅಧ್ಯಕ್ಷರಾದ ರಾಜು ಪತ್ತಾರ ಬಳಗಾನೂರ,
ನಂದಿ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ರವಿಕುಮಾರ ಅಚ್ಚಪ್ಪನವರ್,
ಅಮರೇಗೌಡ ಪಾಟೀಲ,
ನಾಗರಾಜ ಸ್ಥಾವರಮಠ,
ಅಂಬಿಕಾ ಪಾಟೀಲ,
ಶರಣಮ್ಮ,
ಆಸ್ಮಾ ಬೇಗಂ,ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ