ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವರಾಮ್ ಹೆಬ್ಬಾರ್ ಅವರೇ ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ:ಮುಂಡಗೋಡ ಮಂಡಲ ಬಿಜೆಪಿ ಒತ್ತಾಯ

ಮುಂಡಗೋಡ:ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಂಡಗೋಡ ಬಿಜೆಪಿ ಮಂಡಲ ದ ಪ್ರಮುಖರು ಮಂಗಳವಾರ ಮುಂಡಗೋಡ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಒತ್ತಾಯ ಮಾಡಿದರು.ಪತ್ರಕರ್ತ ರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಲ್ ಟಿ ಪಾಟೀಲ್,ಬಿಜೆಪಿ ಪಕ್ಷ ಹೆಬ್ಬಾರ್ ಅವರಿಗೆ ಮಂತ್ರಿ ಸ್ಥಾನ ಕೊಟ್ಟು ಅಧಿಕಾರ ಅನುಭವಿಸುವಂತೆ ಮಾಡಿತು,ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ವರ್ಷದ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಜಯ ಸಾಧಿಸಿದರು.ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕಾಗೇರಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಾಗ ಹೆಬ್ಬಾರ್ ತಮ್ಮ ಪುತ್ರನನ್ನು ಮತ್ತು ಬೆಂಬಲಿಗರನ್ನು ಕಾಂಗ್ರೆಸ್ ಗೆ ಕಳಿಸಿದರು.ಆದರೂ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 18000 ಮತಗಳ ಲೀಡ್ ಸಿಕ್ಕಿತು.ಹೆಬ್ಬಾರ್ ಬೇರೆ ಪಕ್ಷಕ್ಕೆ ಹೋಗೋದಾದ್ರೆ ಹೋಗಲಿ ಆದರೆ ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.
ಮಂಡಲ ಅಧ್ಯಕ್ಷ ಮಂಜುನಾಥ್ ಪಾಟೀಲ್ ಮಾತನಾಡಿ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ವಿರುದ್ಧವೇ ಕೆಲಸ ಮಾಡಿದ್ದಾರೆ ಆದರೂ ಅಭೂತಪೂರ್ವ ಜಯ ದಾಖಲಿಸಿದೆ.ಹೆಬ್ಬಾರ್ ಅವರ ಬಗ್ಗೆ ನಮಗೆ ಗೌರವವಿದೆ.ಕ್ಷೇತ್ರದಲ್ಲಿ ಅವರ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಯಾಗಿದೆ.ಇನ್ನಾದರೂ ಹೆಬ್ಬಾರ್ ದೃಢ ನಿರ್ಧಾರ ತೆಗೆದುಕೊಳ್ಳಲು ಇದು ಸಕಾಲ ಮರಳಿ ಪಕ್ಷದ ಕೆಲಸದಲ್ಲಿ ಪಾಲ್ಗೊಳ್ಳಲಿ ಇಲ್ಲವೇ ರಾಜೀನಾಮೆ ಕೊಟ್ಟು ಹೊರ ನಡೆಯಲಿ ಎಂದರು.
ಪತ್ರಿಕಾಗೋಷ್ಠಿ ವೇಳೆ ಬಸವರಾಜ್ ಓಶಿಮಠ. ಸಂತೋಷ್ ತಳವಾರ ಮಂಜುನಾಥ್ ಹರ್ಮಲ್ಕರ್,ದತ್ತಾತ್ರೇಯ ರಾಯ್ಕರ್,ಬಸವರಾಜ್ ತನಿಕೆದಾರ್,ಶ್ರೀಕಾಂತ್ ಸಾನು,ಭರತ ಹದಳಗಿ ಮುಂತಾದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ