ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ

ಕಲಬುರಗಿ:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿಯ ಉತ್ತರ ಕರ್ನಾಟಕ ವಕ್ತಾರ ಆನಂದ ತೆಗನೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ದರ್ಶನ್ ಅನೇಕ ಚಿತ್ರಗಳನ್ನು ಮಾಡಿ ಸಮಾಜ ತಿದ್ದುವ ಕೆಲಸ ಮಾಡಿದ್ದರು ಆದರೆ ನಿಜ ಜೀವನದಲ್ಲಿ ಒಬ್ಬ ಭಿನ್ನವಾದ ವ್ಯಕ್ತಿಯಾಗಿದ್ದಾರೆ.
ಕೊಲೆಯಾದ ರೇಣುಕಾ ಸ್ವಾಮಿ ತಂದೆ-ತಾಯಿಯ ನೋವು ಎಂಥವರಿಗೂ ಕಣ್ಣೀರು ತರಿಸಿದೆ.ಒಂದು ವರ್ಷದ ಕೆಳಗೆ ಮದುವೆ ಆಗಿ,ಪತ್ನಿ ಗರ್ಭಿಣಿ ಇದ್ದಾರೆ. ಈ ಸಂದರ್ಭದಲ್ಲಿ ಪತಿಯನ್ನು ಕಳೆದುಕೊಂಡ ಪತ್ನಿ ಗತಿ ಏನಾಗಬೇಡ ಎಂದು ಪ್ರಶ್ನಿಸಿದ ಅವರು,ಇಂತಹ ಕೊಲೆ ಮಾಡಿರುವ ದರ್ಶನ್ ಒಬ್ಬ ಅಮಾನವೀಯ ಹಾಗೂ ಕ್ರೂರ ವ್ಯಕ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದಾನೆ.ಹಿರಿಯರಿಗೆ ಮಗನ ವಿಚಾರ ತಿಳಿಸಬಹುದಿತ್ತು.ಕಾನೂನಿನಲ್ಲೂ ಕೂಡಾ ದೂರು ಕೊಡಲು ಅವಕಾಶ ಇತ್ತು.ಕೊಲೆ ಮಾಡುವ ಕೆಲಸ ಮಾಡಿದ್ದು ನಿಜಕ್ಕೂ ಸರಿಯಲ್ಲ ನೇರವಾಗಿ ಈ ತಂಡ ಭಾಗಿಯಾಗಿರುವುದು ಕಂಡುಬಂದಿದ್ದು,ಕಾನೂನಿನಡಿ ಕಠಿಣ ಶಿಕ್ಷೆ ದರ್ಶನ್ ಗೆ ನೀಡಬೇಕು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
ಇದು ರೇಣುಕಾಸ್ವಾಮಿಯ ಕೊಲೆ ಅಲ್ಲ, ಮಾನವೀಯತೆಯ ಕೊಲೆ ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಮತ್ತು ಇಂತಹ ಪ್ರಕರಣಗಳು ಪುನರ್ ಘಟಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ