ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಚೆನ್ನಾರಡ್ಡಿಗೌಡ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್ ಒತ್ತಾಯ

ಯಾದಗಿರಿ:ಹಿರಿಯ,ಅನುಭವಿ,ಮುತ್ಸದ್ದಿ ನಾಯಕರೂ ಆದ ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿಗೌಡ ಪಾಟೀಲ್ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ವಡಗೇರಾ ತಾಲ್ಲೂಕು ಅಧ್ಯಕ್ಷರಾದ ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್ ಒತ್ತಾಯಿಸಿದ್ದಾರೆ.
ಈ ಕುರಿತು ಮಾದ್ಯಮ ಹೇಳಿಕೆ ನೀಡಿರುವ ಅವರು, ಚೆನ್ನಾರಡ್ಡಿಗೌಡರು ತಾಲ್ಲೂಕಿನ ನಾಯ್ಕಲ್ ಜಿಲ್ಲಾ ಪರಿಷತ್ ಕ್ಷೇತ್ರದ ಸದಸ್ಯರಾಗಿ,ವಿಧಾನ ಪರಿಷತ್ ಸದಸ್ಯರಾಗಿ ಅಪಾರ ಸೇವೆ ಮಾಡಿದ್ದು ಅಪಾರ ಅನುಭವ ಹೊಂದಿರುತ್ತಾರೆ.
ಸಮಾಜದ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿ ಸುದೀರ್ಘ ನಾಲ್ಕು ದಶಕಗಳಿಂದ ವಿವಿಧ ರಂಗಗಳಲ್ಲಿ ನಿರಂತರ ಸಮಾಜಕ್ಕೆ ಸೇವೆ ಸಲ್ಲಿಸುತ್ತಾ ಬಂದ ಜನಪರ ರಾಜಕಾರಣಿಯಾಗಿದ್ದಾರೆ.
ಶಾಸಕರಾಗಿ ಭಾರಿ ಲೀಡ್ ನಲ್ಲಿ ಗೆದ್ದು ಬಂದಿದ್ದು ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಯಾದಗಿರಿ ಮತ್ತು ಚಿತ್ತಾಪುರಗಳಲ್ಲಿ ಲೀಡ್ ಬರಲು ಚೆನ್ನಾರಡ್ಡಿಗೌಡರ ಕೊಡುಗೆ ಇದೆ.ಸುರಪುರ ಉಪ ಚುನಾವಣೆಯಲ್ಲಿಯೂ ಅಭ್ಯರ್ಥಿ ಗೆಲ್ಲಲು ಶ್ರಮಿಸಿದ್ದಾರೆ.ಅಲ್ಲದೇ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಇವರ ಕೊಡುಗೆ ಅಪಾರವಾಗಿದೆ.

ಇಂತಹ ಹಿನ್ನೆಲೆ ಇರುವ ಶಾಸಕರಿಗೆ ಮುಂಬರುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಅವರ ಅನುಭವವನ್ನು 4 ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ