ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚೆನ್ನಾರೆಡ್ಡಿ ಪಾಟೀಲ್ ತುನ್ನುರ್ ಗೆ ಸಚಿವ ಸ್ಥಾನ ನೀಡಿ:ಕುರಕುಂದಾ ಮಲ್ಲು ಹಲಗಿ

ಯಾದಗಿರಿ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರನ್ನು ಸಚಿವರನ್ನಾಗಿ ಮಾಡಿ ಸಂಪುಟಕ್ಕೆ ಸೇರಿಸಿಕೊಂಡರೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಅನೂಕುಲವಾಗಿ ಅಭಿವೃದ್ಧಿಗೆ ಮತ್ತಷ್ಟು ವೇಗ ಹೆಚ್ಚುತ್ತದೆ ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ ಸಿ ವಿಭಾಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ವಡಗೇರಾ ತಾಲ್ಲೂಕಿನ ಕುರಕುಂದಾ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಮಲ್ಲು ಹಲಗಿ ಅವರು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ದಶಕಗಳಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಾಗೂ ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಇವರು ಶಾಸಕರಾಗಿ ಬಡವರ,ರೈತರ ಹಾಗೂ ವಿದ್ಯಾರ್ಥಿಗಳ ಸಂಕಷ್ಟವನ್ನೆಲ್ಲಾ ಆಲಿಸಿ ಸ್ಥಳದಲ್ಲಿ ಪರಿಹಾರ ನೀಡಿ,ಅಭಿವೃದ್ಧಿ ಕೆಲಸಗಳನ್ನು ಮಾಡಿ ಬೇಧ ಭಾವ ಮಾಡದೇ ಸರ್ವ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಮಾದರಿಯ ನಾಯಕರೆನಿಸಿಕೊಂಡಿದ್ದಾರೆ‌. ಲೋಕಸಭಾ ಹಾಗೂ ಈಶಾನ್ಯ ಪದವಿಧರ ಅಭ್ಯರ್ಥಿಗಳ ಗೆಲುವಿಗೆ ಶ್ರಮಿದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಅನುಭವಿ ರಾಜಕಾರಣಿ ಅಗಿದ್ದ ಯಾದಗಿರಿ ಮತ ಕ್ಷೇತ್ರದ ಜನಪ್ರಿಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರ ಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಸಚಿವರನ್ನಾಗಿ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,ಸಿಎಂ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ (ಡಿಸಿಎಂ) ಡಿಕೆ ಶಿವಕುಮಾರ್ ಅವರಲ್ಲಿ ವಡಗೇರಾ ತಾಲ್ಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ.ಆರ್.ಎಚ್.ಎಸ್) ಅಧ್ಯಕ್ಷ ಹಣಮಂತ ಮಾಲಹಳ್ಳಿ,ಭೀಮರಾಯ ಜಗದ್ ಕೋನಹಳ್ಳಿ, ಕುಮಾರ್ ತುಮಕೂರು,ಮರಿಲಿಂಗ ಹೊಂಟೂರ, ಸುರೇಶ ಹಾಲಗೇರಾ,ಮಲ್ಲೇಶ್ ಪೀರಿ‌,ಹಣಮಂತ ಒಡಕರ್ ಅವರು ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ