ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭ್ರಷ್ಟಾಚಾರಿಗಳ ವಿರುದ್ಧ ಹೋರಾಟ ಮಾಡಲು ನಮ್ಮ ಸಂಘಟನೆ ಸಿದ್ಧ:ರಾಜ್ಯಾಧ್ಯಕ್ಷರು ಮಹೇಶ ಎಸ್ ಶೀಗೀಹಳ್ಳಿ

ಬೆಳಗಾವಿ:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ಭ್ರಷ್ಟಾಚಾರ,ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಸಿಗದೆ ಹೋದರೆ ಭ್ರಷ್ಟಾಚಾರಿಗಳ ವಿರುದ್ಧ ಹೋರಾಟ ಮಾಡಲು ನಮ್ಮ ಸಂಘಟನೆ ಸಿದ್ಧ-ರಾಜ್ಯಾಧ್ಯಕ್ಷರು ಮಹೇಶ ಎಸ್ ಶೀಗೀಹಳ್ಳಿ

ಬೆಳಗಾವಿ:ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕ (ರಿ.) ಸಂಘಟನೆಯ ರಾಜ್ಯಾಧ್ಯಕ್ಷರು ಮಹೇಶ ಶಿಗಿಹಳ್ಳಿ ಇವರ ನೇತೃತ್ವದಲ್ಲಿ ಸಂಘಟನೆಯ ಸವದತ್ತಿ ಬೈಲಹೊಂಗಲ ಯರಗಟ್ಟಿ ರಾಯಬಾಗ ಖಾನಾಪುರ ಕಿತ್ತೂರು ಬೆಳಗಾವಿ ತಾಲೂಕು ಮತ್ತು  ಗ್ರಾಮೀಣ ಬೆಳಗಾವಿ ನಗರ ಕಮಿಟಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪದಗ್ರಹಣ ಮಾಡಲಾಯಿತು ಮತ್ತು ವಾಲ್ಮೀಕಿ ಅಬಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ಭ್ರಷ್ಟಾಚಾರ ವಿಷಯವಾಗಿ ಸಭೆಯಲ್ಲಿ ಚರ್ಚೆ ಮಾಡಿ ನಿಗಮದಲ್ಲಿ ಇರುವ ಅಧಿಕಾರಿಗಳು ಮತ್ತು ಕೆಲವು ರಾಜಕಾರಣಿಗಳ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಮೃತ ಪಟ್ಟ ನಿಗಮದ ಅಧಿಕಾರಿ ಚಂದ್ರಶೇಖರ್ ರವರ ಡೆತ್ ನೋಟ್ ನಂತೆ ಸರಿಯಾಗಿ ತನಿಖೆ ಆಗಿ ತಪ್ಪಿತಸ್ಥರ ಮೇಲೆ ಸರಿಯಾದ ಕ್ರಮ ಕೈಗೊಂಡು ಯಾವುದೇ ಬಲಿಷ್ಠ ರಾಜಕಾರಣಿ ಆಗಿರಲಿ ಅಧಿಕಾರಿಯಾಗಿರಲಿ ಅವರ ಮೇಲೆ ಯಾವುದೇ ಮುಲಾಜ್ ಇಲ್ಲದೆ ತನಿಖೆ ಮಾಡಿ ಶಿಕ್ಷೆ ನೀಡಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ನ್ಯಾಯ ಸಿಗಲಿ ಮತ್ತು 187 ಕೋಟಿ ಭ್ರಷ್ಟಾಚಾರ ಹಣವನ್ನು ವಾಪಸ್ಸು ನಿಗಮಕ್ಕೆ ನಿಯೋಗ ಮಾಡಲೇಬೇಕು ಇಲ್ಲವಾದರೆ ಸರಕಾರದ ವಿರುದ್ಧ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಮಹೇಶ ಎಸ್ ಶಿಗೀಹಳ್ಳಿ ರಾಜ್ಯಾಧ್ಯಕ್ಷರು ಎಚ್ಚರಿಕೆ ನೀಡಿದರು ಮತ್ತು ಸಭೆಯಲ್ಲಿ ಮುಂದಿನ ಹೋರಾಟಗಳ ರೂಪುರೇಷೆಗಳ ಬಗ್ಗೆ  ಸಭೆಯಲ್ಲಿ ಚರ್ಚೆ ಮಾಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಮತ್ತು ತಾಲೂಕು ಮತ್ತು ಗ್ರಾಮೀಣ ಬೆಳಗಾವಿ ನಗರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪದಾಧಿಕಾರಿಗಳು:
ಮಹೇಶ ಎಸ್ ಶೀಗೀಹಳ್ಳಿ-ರಾಜ್ಯಾಧ್ಯಕ್ಷರು

ಮಲ್ಲೇಶ ಮೂಳಗಸಿ-ರಾಜ್ಯ ಸಂಘಟನಾ ಕಾರ್ಯದರ್ಶಿ

ರಾಮ್ ಪೂಜಾರಿ-ಬೆಳಗಾವಿ ಜಿಲ್ಲಾ ಗೌರವ ಅಧ್ಯಕ್ಷರು

ಶಕ್ತಿ ಶೀಗೀಹಳ್ಳಿ-ಬೆಳಗಾವಿ ತಾಲೂಕು ಉಪಾಧ್ಯಕ್ಷರು

ಮಂಜು ಸೀತಿಮನಿ-ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ

ಮಂಜು ತಳವಾರ್-ಬೈಲಹೊಂಗಲ ತಾಲೂಕು ಅಧ್ಯಕ್ಷರು

ಬಸವರಾಜ್ ಪೂಜೇರಿ-ಸವದತ್ತಿ ತಾಲೂಕಿನ ಅಧ್ಯಕ್ಷರು

ಮೇಘರಾಜ ಬೈಲವಾಡ-ಯರಗಟ್ಟಿ ತಾಲೂಕು ಅಧ್ಯಕ್ಷರು

ಆನಂದ್ ಊದಿ-ಖಾನಾಪುರ ತಾಲೂಕಿನ ಅಧ್ಯಕ್ಷರು

ಹಾಗೂ ಇನ್ನುಳಿದ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ-ಕರಿಯಪ್ಪ.ಮಾ.ಮಾದರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ