ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡ ಪೊಲೀಸರ ದಾಳಿ:ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ಮುಂಡಗೋಡ:ನಿನ್ನೆ ಬೆಳಿಗ್ಗೆ 10-30 ಗಂಟೆಯ ಸುಮಾರಿಗೆ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಆರೋಪಿತನಾದ ರಿಹಾನ ತಂದೆ ಹಸನ ಶೇಖ ಪ್ರಾಯ-22 ವರ್ಷ ವೃತ್ತಿ-ಕೂಲಿ ಕೆಲಸ,ಜಾತಿ-ಮುಸ್ಲಿಂ ಸಾ।।ಮಜ್ಜಿಗಲ್ಲಿ, ಯಲ್ಲಾಪುರ ಇವರು ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೇ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ದಾಳಿ ಮಾಡಿ ಆರೋಪಿತನನ್ನು ಬಂಧಿಸಲಾಗಿದೆ.
ದಾಳಿಯ ವೇಳೆ ಸುಮಾರು ರೂ 80,000/- ಬೆಲೆ ಬಾಳುವ 2.152 ಕಿಲೋ ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಡಾ||ವಿಷ್ಣುವರ್ಧನ್ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ,ಶ್ರೀ ಸಿ.ಟಿ ಜಯಕುಮಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ,ಶ್ರೀ ಗಣೇಶ ಕೆ.ಎಲ್ ಶಿರಸಿ ರವರ ಮಾರ್ಗದರ್ಶನದಲ್ಲಿ ಅಕ್ರಮ ಗಾಂಜಾವನ್ನು ಮಾರಾಟ ಮಾಡುವ ಆರೋಪಿತನನ್ನು ಬಂಧಿಸುವಲ್ಲಿ ಶ್ರೀ ರಂಗನಾಥ ನೀಲಮ್ಮನವರ ಪಿ.ಐ ಮುಂಡಗೋಡ ಪೊಲೀಸ್ ಠಾಣೆ,ಶ್ರೀ ಪರಶುರಾಮ ಮಿರ್ಜಿಗಿ ಪಿ.ಎಸ್.ಐ.ಶ್ರೀ ಹನಮಂತ ಕುಡಗುಂಟಿ ಪಿ.ಎಸ್.ಐ ಹಾಗೂ ಸಿಬ್ಬಂದಿಗಳಾದ ಮಂಜಪ್ಪ ಚಿಂಚಲಿ ಹೆಚ್.ಸಿ-1109,ಗಣಪತಿ ಹುನ್ನಳ್ಳಿ ಹೆಚ್.ಸಿ-758,ಕೋಟೇಶ ನಾಗರವಳ್ಳಿ ಪಿಸಿ-700, ಅಣ್ಣಪ್ಪ ಬುಡಿಗೇರ ಪಿಸಿ-1074,ಮಹಾಂತೇಶ ಮುಧೋಳ ಪಿಸಿ-1028,ಬಸವರಾಜ ಒಡೆಯರ ಪಿಸಿ-444 ಹಾಗೂ ಕೆಂಚಪ್ಪ ಜಾಲಿಕಟ್ಟಿ ಪಿಸಿ-1323 ಮುಂಡಗೋಡ ಪೊಲೀಸ್ ಠಾಣೆರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರರವರು ಪ್ರಶಂಸಿಸಿ ಶ್ಲಾಘನೆ ವ್ಯಕ್ತಪಡಿಸಿರುತ್ತಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ