ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಕ್ತದಾನಿಗಳಿಂದ ಜೀವ ಉಳಿಸುವುದು ಸಾಮಾಜಿಕ ಕೊಡುಗೆ:ಡಾ.ಸತೀಶ ಬೆಳಗಟ್ಟಿ

ಕಲಬುರಗಿ:ರಕ್ತದಾನದ ಮಹತ್ವ ಹಾಗೂ ರಕ್ತದಾನಿಗಳಿಂದ ಜೀವ ಉಳಿಸುವುದರಲ್ಲಿ ಸಾಮಾಜಿಕ ಕೊಡುಗೆ ಮತ್ತು ರಕ್ತದಾನಿಗಳಿಗೆ ಆಗುವ ಲಾಭಗಳ ಪಡೆಯಬೇಕು ಎಂದು ಇಎಸ್ಐ ಆಸ್ಪತ್ರೆಯ ವೈದ್ಯರಾದ ಡಾ.ಸತೀಶ ಬೆಳಗಟ್ಟಿ ಅವರು ವಿಧ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.
ನಗರದ‌ ಸರಕಾರಿ ಸ್ವಯತ್ತ ಮಹಾವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸವಿತಾ ತಿವಾರಿ ಮಾತನಾಡಿ ಅವರು ಸಬಲ ಯುವಕರು ರಕ್ತವನ್ನು ದಾನ ಮಾಡುವುದರ ಮುಖಾಂತರ ಜೀವದ ಮಹತ್ವವನ್ನು ಅರಿತುಕೊಳ್ಳಬೇಕು, ಒಳ್ಳೆಯ ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂಬ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಮೀನಾಕ್ಷಿ ಕೆ ಸಿ ಸಂಯೋಜಕರಾದ ಶ್ರೀ ದಿನೇಶ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ ಗಾಯತ್ರಿ, ಮತ್ತು ಪ್ರಾಣಿ ಶಾಸ್ತ್ರ ವಿಭಾಗದ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಾಜ ನಿರೂಪಿಸಿದರು.ಐಶ್ವರ್ಯ ಸ್ವಾಗತಿಸಿ,ಡಾ.ರಾಜಶೇಖರ ಅವರು ಕಾರ್ಯಕ್ರಮವನ್ನು ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ