ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರಣ್ಯ ಇಲಾಖೆಯ ವಿಶೇಷ ಸಾಧಕ ಪ್ರಶಸ್ತಿ

ಶಿವಮೊಗ್ಗ:ಅರಣ್ಯ ಇಲಾಖೆಯ ವಿಶೇಷ ಸಾಧಕ, ಮಂಡಗದ್ದೆ ವಲಯ ಅರಣ್ಯಾಧಿಕಾರಿ ಎಂ.ಪಿ. ಆದರ್ಶರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಪಿ. ಆದರ್ಶರವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ 2022-23ನೇ ಸಾಲಿನ ಚಿನ್ನದ ಪದಕದ ಪುರಸ್ಕಾರವನ್ನು ನೀಡಲಾಗಿದೆ.
ವಲಯ ಅರಣ್ಯ ಅಧಿಕಾರಿ ಆದರ್ಶ ಅವರು ಈ ಹಿಂದೆ ಹೊಸನಗರ ತಾಲೂಕಿನ ಹೊಸನಗರ, ನಗರದ ವಲಯ ಅರಣ್ಯ ಅಧಿಕಾರಿ ಸೇವೆ ಸಲ್ಲಿಸಿ ಕಳೆದ ಎರಡು ವರ್ಷಗಳಿಂದ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಅರಣ್ಯ ಭೂಮಿ ಸಂರಕ್ಷಣೆ, ನೈಸರ್ಗಿಕವಾಗಿರುವ ಅರಣ್ಯ ಪುನರುತ್ಪತ್ತಿ ಸೇರಿದಂತೆ ಹತ್ತಾರು ಉತ್ತಮ ಕೆಲಸ ಮಾಡಿದ ವಿಷಯಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಮಂಡಗದ್ದೆಯ ವಲಯ ಅರಣ್ಯ ಅಧಿಕಾರಿಯಾಗಿ ಆದರ್ಶರವರು ಅರಣ್ಯ ಮತ್ತು ಅರಣ್ಯ ಭೂಮಿಯನ್ನು ಸಂರಕ್ಷಣೆ ಮಾಡುವುದರ ಜೊತೆಯಲ್ಲಿ ಅನೇಕ ಭೂ ಒತ್ತುವರಿ, ಕಬಳಿಕೆಯನ್ನು ಪತ್ತೆ ಹಚ್ಚಿ ಕ್ರಮ ಜರುಗಿಸುವುದರೊಂದಿಗೆ ಹೊಸ ಒತ್ತುವರಿಗಳನ್ನು ತೆರವುಗೊಳಿಸುವುದು ಹಿಂದಿನ ಒತ್ತುವರಿ, ಕಬ್ಬಳಿಕೆಗಳನ್ನು ನ್ಯಾಯಾಲಯದಲ್ಲಿ ಮತ್ತು ಇಲಾಖೆಯ ಮಟ್ಟದಲ್ಲಿ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಕ್ರಮ ಜರುಗಿಸಲು ಮುಂದಾಗಿದ್ದು, ಅರಣ್ಯ ಭೂಮಿಯ ಅಕ್ರಮ ಮರ ಕಡತಲೆ, ವನ್ಯಜೀವಿಗಳ ಬೇಟೆಯಾಡಿ ಪ್ರಾಣಿ ಗಳ ಹತ್ತೆ, ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಮರಳು, ಮಣ್ಣು ತೆಗೆದು ಸಾಗಿಸುವುದು ಮುಂತಾದ ಅನೇಕ ಗಂಭೀರ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸುವುದರ ಜೊತೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದನ್ನು ಸರ್ಕಾರ ಪರಿಗಣಿಸಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರವನ್ನು ನೀಡಿ ಘೋಷಣೆ ಮಾಡಿರುತ್ತದೆ.
ಆದರ್ಶರವರು ಮಂಡ್ಯ ಜಿಲ್ಲೆಯ ನಾಗಮಂಗಲ, ಶಿವಮೊಗ್ಗ ಹೊಸನಗರ, ನಗರ ಮುಂತಾದ ಊರುಗಳಲ್ಲಿ ಅರಣ್ಯ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.
ಅವರಿಗೆ ರಾಜ್ಯ ಮುಖ್ಯ ಮಂತ್ರಿಗಳ ಚಿನ್ನದ ಪದಕ ಲಭಿಸಿರುವುದು ತೀರ್ಥಹಳ್ಳಿಯ ಹೆಮ್ಮೆಯ ವಿಚಾರವಾಗಿದ್ದು ತೀರ್ಥಹಳ್ಳಿಗೆ ಮತ್ತು ಅರಣ್ಯ ಇಲಾಖೆಗೆ ರಾಜ್ಯಮಟ್ಟದಲ್ಲಿ ಮತ್ತೊಂದು ಕಿರೀಟ ಮತ್ತು ಗೌರವ ಲಭಿಸಿದಂತಾಗಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ