ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಕಲಚೇತನರಿಗೆ ಮತ್ತು ಹಿರಿಯ ನಾಗರೀಕರಿಗೆ ತಪಾಸಣಾ ಶಿಬಿರ

ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಲಿಂಕೋ ಸಂಸ್ಥೆಯ ವತಿಯಿಂದ ಕೇಂದ್ರ ಸರ್ಕಾರದ ಅಡಿಪ್ ಮತ್ತು ವಯೋಶ್ರೀ ಯೋಜನೆಯಡಿ ಶಿಬಿರಗಳನ್ನು ನಿಗದಿತ ದಿನಾಂಕಗಳಂದು ಅಯೋಜಿಸಿದ್ದು, ಈ ಸಂಸ್ಥೆಯು ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲು ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡಿದೆ.
ಜೂನ್ 21 ರಂದು ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ,ಜೂ. 22 ರಂದು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ,ಜೂ. 23 ಸಾಗರ ಸಾರ್ವಜನಿಕ ಆಸ್ಪತ್ರೆ, ಜೂ.24 ಸೊರಬ ಸಾರ್ವಜನಿಕ ಆಸ್ಪತ್ರೆ,
ಜೂ. 25 ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆ,
ಜೂ. 26 ಹೊಸನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಜೂ. 27 ಮತ್ತು 28 ರಂದು ಶಿವಮೊಗ್ಗ ಜಿಲ್ಲಾ ಮೆಗ್ಗಾನ ಭೋದನಾ ಆಸ್ಪತ್ರೆಗಳಲ್ಲಿ ಶಿಬಿರಗಳು ನಡೆಯಲಿದೆ.
ಈ ಶಿಬಿರದಲ್ಲಿ ಭಾಗವಹಿಸಲು ವಿಕಲಚೇತನರು ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್ ಅಥವಾ ವಾರ್ಷಿಕ ಆಧಾಯ ರೂ. 2.70 ಲಕ್ಷ ಮೀರದಿರುವ ಆದಾಯ ಪ್ರಮಾಣ ಪತ್ರ. ಹಿರಿಯ ನಾಗರಿಕರು ಗುರುತಿನ ಚೀಟಿ ಅಥವಾ ವಯೋಮಿ ಸೂಚಿಸು ದಾಖಲಾತಿ, ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್ ಅಥವಾ ವಾರ್ಷಿಕ ಆಧಾಯ ರೂ. 2.70 ಲಕ್ಷ ಮೀರದಿರುವ ಆದಾಯ ಪ್ರಮಾಣ ಪತ್ರ ಗಳನ್ನು ಹಾಜರುಪಡಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ – ಹುಚ್ಚುರಾಯಪ್ಪ- 9741161346, ಭದ್ರಾವತಿ-ದಿನೇಶ್-7899137243, ಸಾಗರ ಶ್ಯಾಮ್‍ಸುಂದರ್-9535247757, ಸೊರಬ- ಭರತ್‍ಕುಮಾರ್-9110493122, ತೀರ್ಥಹಳ್ಳಿ -ದಿವಾಕರ್ ಬಿ.ಆರ್.-9480767638, ಹೊಸನಗರ-ರವಿಕುಮಾರ್- 9731922693, ಮೆಗ್ಗಾನ್ ಆಸ್ಪತ್ರೆ-ಮಲ್ಲಿಕಾರ್ಜುನ-9980150110 ಗಳನ್ನು ಸಂಪರ್ಕಿಸುವುದು.

ವರದಿ ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ