ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ :ಸಕಲ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ:ಜೂನ್ 21 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು,ಯೋಗ ದಿನದ ಯಶಸ್ವಿ ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜೂನ್ 15 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಯೋಗ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜೂ.21 ಕ್ಕೆ ‘ಯೋಗ ಫಾರ್ ಸೆಲ್ಫ್ ಆಂಡ್ ಸೊಸೈಟಿ’,ಘೋಷ ವಾಕ್ಯದಡಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳ್ಳಿಗೆ 6.30 ಕ್ಕೆ ವಿದ್ಯಾರ್ಥಿಗಳು,ಸ್ವಯಂ ಸೇವಕರು, ಸಾರ್ವಜನಿಕರು ಮತ್ತು ಅಧಿಕಾರಿಗಳು ಸೇರಿದಂತೆ 500 ಜನರು ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವರು.
ಜೂನ್ 21 ರ ಬೆಳಿಗ್ಗೆ 6.30 ಕ್ಕೆ ಎಲ್ಲರೂ ಒಂದೆಡೆ ಸೇರಿ,ಬೆಳಿಗ್ಗೆ 6.45 ರಿಂದ 7 ಗಂಟೆವರೆಗೆ ಯೋಗ ಗೀತೆ, ಬೆಳಿಗ್ಗೆ 7 ರಿಂದ 7.45 ರವರೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಯೋಗ ಪ್ರದರ್ಶನ,
ಬೆಳಿಗ್ಗೆ 8 ರಿಂದ 8.30 ರವರೆಗೆ ವೇದಿಕೆ ಕಾರ್ಯಕ್ರಮ. 8.30 ರಿಂದ 9.45 ರವರೆಗೆ ಉಪನ್ಯಾಸ ಮತ್ತು 9.20 ಕ್ಕೆ ಉಪಹಾರ ವ್ಯವಸ್ಥೆ ಇರುತ್ತದೆ.
ಪೊಲೀಸ್ ಇಲಾಖೆಯವರು ಕಾರ್ಯಕ್ರಮ ನಡೆಯುವ ಸ್ಥಳದ ಭದ್ರತೆ,ವಾಹನ ದಟ್ಟಣೆ ನಿರ್ವಹಣೆ ಹಾಗೂ ಮಹಾನಗರಪಾಲಿಕೆ ವತಿಯಿಂದ ಕುಡಿಯುವ ನೀರು ಸ್ವಚ್ಚತಾ ವ್ಯವಸ್ಥೆ ಮತ್ತು ಮಾಹಿತಿ ಫಲಕ ಹಾಕಲು ಸಹಕರಿಸಬೇಕು.ಆಯುರ್ವೇದ ಮಹಾವಿದ್ಯಾಲಯ ಹಾಗೂ ಡಿಡಿಪಿಯು ಅವರು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಬೇಕು ಹಾಗೂ ಯೋಗ ದಿನಾಚರಣೆಗೆ ಅಗತ್ಯವಾದ ಇತರೆ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿಯಾದ ಡಾ.ಲಿಂಗರಾಜ ಎಸ್ ಹಿಂಡಸಗಟ್ಟಿ ಮಾತನಾಡಿ ಜೂ.10 ರಿಂದ 20 ವರೆಗೆ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಯೋಗ ಅಭ್ಯಾಸ ಆಯೋಜಿಸಲಾಗುತ್ತಿದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಯಲ್ಲಿ ಏಕಕಾಲದಲ್ಲಿ ಯೋಗಾಭ್ಯಾಸ ಮತ್ತು ಆಯುಷ್ ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಪಿಸಿಓಡಿ ಮತ್ತು ಥೈರಾಡ್ ನಿರ್ವಹಣೆ ಕುರಿತು ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಪರಿಕಲ್ಪನೆಯಡಿ ಮಹಿಳೆಯರಿಗೆ ಯೋಗಾಭ್ಯಾಸ ನಡೆಸಲಾಗಿದೆ ಎಂದು ಮಾಹಿತಿ ಒದಗಿಸಿದರು.
ಸಭೆಯಲ್ಲಿ ಡಿ.ಹೆಚ್.ಒ.ಡಾ.ನಟರಾಜ್,
ಡಿಡಿಪಿಯು ಕೃಷ್ಣಪ್ಪ,ಪೋಲಿಸ್ ಅಧಿಕಾರಿಗಳು,ಜಿಲ್ಲಾ ಮಟ್ಟದ ಅಧಿಕಾರಿಗಳು,ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳು,ಸಿಬ್ಬಂದಿಗಳು ಹಾಜರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ