ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಡಪದ ಸಮಾಜದ ನಿಸ್ವಾರ್ಥಿಯ ಸೇವಕ ಡಾ.ಎಂ ಬಿ ಹಡಪದ ಸುಗೂರ ಎನ್ ಗೆ ರವೀಂದ್ರನಾಥ ಟ್ಯಾಗೋರ್ ಪುರಸ್ಕಾರ ಪ್ರಶಸ್ತಿ ‌


ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಹಡಪದ ಸಮಾಜದ ನಿಸ್ವಾರ್ಥ ಸೇವೆ ಗುರುತಿಸಿ ಡಾ.ಎಂ ಬಿ ಹಡಪದ ಸುಗೂರ ಎನ್ ಗೆ ‌ಇದೇ 2024 ನೇ ಸಾಲಿನ ಬೆಂಗಳೂರು ನಗರದ ವೆಯಿಲ್ ಫೌಂಡೇಶನ್ ಸಂಸ್ಥೆಯ ಕೊಡಗಿ ತಿರುಮಲಾಪುರ ಹೆಸರಘಟ್ಟ ಇವರ ವತಿಯಿಂದ ‘ರವೀಂದ್ರನಾಥ ಟ್ಯಾಗೋರ್ ಪುರಸ್ಕಾರ ಪ್ರಶಸ್ತಿ, ಪ್ರಶಸ್ತಿಯ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು. ಭಾರತದ ರಾಷ್ಟ್ರಗೀತೆ ಜನಗಣಮನ ಕರ್ತೃ,ಭಾರತಕ್ಕೆ ಪ್ರಪ್ರಥಮ ನೋಬೆಲ್ ತಂದುಕೊಟ್ಟ ಹೆಮ್ಮೆಯ ಭಾರತೀಯ,ಕವಿ,ತತ್ವಶಾಸ್ತ್ರಜ್ಞರಾದ,ರವೀಂದ್ರನಾಥ್ ಟ್ಯಾಗೋರ್ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಯಿತು.
ಕಷ್ಟಗಳನ್ನು ಮೆಟ್ಟಿ ನಿಂತರೆ ಸಾಧನೆ ಸುಲಭ ಸಾಧ್ಯ,
ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವುದೇ ನಿಜವಾದ ಸೇವೆ
ಎಂದು ಈ ಸಂದರ್ಭದಲ್ಲಿ ಡಾ.ಮಲ್ಲಿಕಾರ್ಜುನ ಬಿ ಹಡಪದ.ಸುಗೂರ ಎನ್ ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಮತ್ತು ಸಮಾಜದ ಸೇವಕರು ತಿಳಿಸಿದರು.
ಇವರು ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ವತಿಯಿಂದ ಅನಾಥರಿಗೆ ಮಾಡುತ್ತಿರುವ ಉಚಿತ ಕ್ಷೌರ ಸೇವೆಯನ್ನು ಗುರುತಿಸಿ ಇದೇ 2024 ರಲ್ಲಿ ಇವರ ಸಮಾಜದ ಹಾಗೂ ಈ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸುಮಾರು ಒಟ್ಟು 1350 ಕ್ಕೂ ಹೆಚ್ಚು ಅನಾಥ, ನಿರ್ಗತಿಕ ಜನತೆಗೆ (ಉಚಿತವಾಗಿ) ಹೇರ್ ಕಟಿಂಗ್ ಮಾಡುವ ಈ ಹಡಪದ ಸಮಾಜದ ಸೇವಕ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ‌ ಎನ್.ಅವರು ಸಮಾಜದ ಸಂಘಟನೆಯ ಜೊತೆ ಜೊತೆಯಲ್ಲಿ ಈ ರೀತಿಯ ವಿಭಿನ್ನ ಸೇವೆ ಮಾಡುತ್ತಿದ್ದಾರೆ.ಅವರ ನಿಸ್ವಾರ್ಥ ಸೇವೆಗೆ ಅನೇಕ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳ ಜೊತೆಗೆ ಈ ಪ್ರಶಸ್ತಿಯೂ ಸೇರಿದೆ ನಮ್ಮ ಜೊತೆಯಲ್ಲಿ ನಮ್ಮ ಸಮಾಜದ ಜನತೆಯ ಸಹಕಾರದಿಂದ ಈ ಉಚಿತ ಕ್ಷೌರ ಸೇವೆಯನ್ನು ಸಾಧಿಸಲು ನಮಗೆ ಈ ಕ್ಷೌರಿಕ ವೃತ್ತಿಯಲ್ಲಿಯೇ ಈ ರೀತಿಯ ಸಾಧನೆ ಮಾಡಲು ನಮಗೆ ಅನೇಕರು ಸಹಕರಿಸಿದರು ಸಮಾಜದ ಗುರುಜೀ ಅನೇಕ ಮಠಾಧೀಶರ ಆಶೀರ್ವಾದ ಮತ್ತು ಸಮಾಜದ ಬಂಧುಗಳ ಸಹಕಾರ,ಈ ಸೇವೆಯಲ್ಲಿ ನಮ್ಮನ್ನು ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ಸೇವೆ ಮಾಡಲು ಪ್ರೇರಣೆಯನ್ನು ನೀಡಿದರು ಎಂದು ಡಾ.ಎಂ ಬಿ ಹಡಪದ ಸುಗೂರ ಎನ್ ಅವರು ಪತ್ರಿಕೆಗೆ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ