ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಟ್ಟೂರು ಪಟ್ಟಣದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಖಂಡಿಸಿ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕೊಟ್ಟೂರು:ಪಟ್ಟಣದ ಅಖಿಲ ಕರ್ನಾಟಕ ಜಂಗಮ ಒಕ್ಕೂಟ ಕೊಟ್ಟೂರು ತಾಲೂಕು ಘಟಕ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ.) ಸಹಕಾರದೊಂದಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಅಪರಾಧಿಗಳಿಗೆ ಸೂಕ್ತ ಶಿಕ್ಷೆ ನೀಡುವಂತೆ ಒತ್ತಾಯಿಸಿ ಕೊಟ್ಟೂರು ತಾಲೂಕಿನ ಉಪ ತಹಶೀಲ್ದಾರ್ ಅನ್ನದಾನೇಶ್ ಪತ್ತರ್ ಅವರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಇಡೀ ಮನುಕುಲವೇ ತಲೆತಗ್ಗಿಸುವಂತೆ ಅವಮಾನದ ರೀತಿಯಲ್ಲಿ ಪ್ರತಿ ಅಂಗಾಂಗಕ್ಕೂ ಚಿತ್ರಹಿಂಸೆ ನೀಡಿ ಹತ್ಯೆಗೈದ 17 ಜನ ಆರೋಪಿಗಳ ತಂಡಕ್ಕೆ ಸರ್ಕಾರ ಸೂಕ್ತ ಹಾಗೂ ನ್ಯಾಯಬದ್ಧವಾಗಿ ಸಂವಿಧಾನದ ಅಡಿಯಲ್ಲಿ ಶಿಕ್ಷೆಯನ್ನು ನೀಡಬೇಕು ಹಾಗೂ ರೇಣುಕಾಸ್ವಾಮಿಯನ್ನು ಕಳೆದುಕೊಂಡು ಅನಾಥವಾಗಿರುವ ಬಡಜಂಗಮ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಅಖಿಲ ಕರ್ನಾಟಕ ಜಂಗಮ ಒಕ್ಕೂಟ, ಕೊಟ್ಟೂರು ತಾಲೂಕು ಅಧ್ಯಕ್ಷರಾದ ಅಡಿಕಿ ಮಂಜುನಾಥ ಮತ್ತು ತಾಲೂಕು ಘಟಕದ ಸದಸ್ಯರು ಉಪ ತಹಶೀಲ್ದಾರ್ ಅವರಿಗೆ ಮನವಿ ಕೊಡುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯನ್ನು ಖಂಡಿಸಿ ಕೊಟ್ಟೂರು ಪಟ್ಟಣದ ಪಂಡಿಯರಾಧ್ಯ ವಕೀಲರು, ಶಿವಯ್ಯ ,ಚಂದ್ರಶೇಖರಯ್ಯ ಪತ್ರಕರ್ತರು, ಸಿದ್ದಯ್ಯ ಪ.ಪಂ ಸದಸ್ಯರು, ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಭರ್ಮಪ್ಪ, ಇತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ