ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ :ಕಾಮಗಾರಿ ಪೂರ್ಣ ಮಾಹಿತಿ ನೀಡಲು ಸೂಚನೆ

ಶಿವಮೊಗ್ಗ:ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ.ಹೆಚ್ ಇವರು ಜೂ.20 ರಂದು ತಮ್ಮ ತಂಡದೊಂದಿಗೆ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಲೋಕಾಯುಕ್ತ ಠಾಣೆಯ ಡಿಎಸ್‍ಪಿ ಉಮೇಶ್ ಈಶ್ವರ್ ನಾಯ್ಕ, ಪೊಲೀಸ್ ನಿರೀಕ್ಷಕರಾದ ಪ್ರಕಾಶ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಗುರುವಾರ ಬೆಳಿಗ್ಗೆ ನಗರದ ಆಯನೂರು ಗೇಟ್, ದ್ವಾರಕ ಕನ್ವೆನ್ಷನ್ ಹಾಲ್ ಹತ್ತಿರ, ಆಲ್ಕೋಳ ಸರ್ಕಲ್, ವಿನೋಬನಗರದ 100 ಅಡಿ ಮುಖ್ಯ ರಸ್ತೆ, ಫ್ರೀಡಂ ಪಾರ್ಕ್, ಗಾಂಧಿನಗರ, ತಿಲಕ್‍ನಗರ, ತುಂಗಾ ನದಿ ಬಳಿ ಮತ್ತು ಇತರೆ ಪ್ರದೇಶಗಳಲ್ಲಿ ಸಂಚರಿಸಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಾದ ಡ್ರೈನೇಜ್, ರಸ್ತೆ, ಚರಂಡಿ, ಫುಟ್‍ಪಾತ್ ಇತರೆ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಸಮಯದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯಕುಮಾರ್ ಮತ್ತು ಅವರ ಸಿಬ್ಬಂದಿಗಳನ್ನು ಬರ ಮಾಡಿಕೊಂಡು ಸ್ಥಳಗಳನ್ನು ಪರಿಶೀಲನೆ ಮಾಡಿ, ಅವೈಜ್ಞಾನಿಕ ಮತ್ತು ಕಳಪೆ ಡ್ರೈನೇಜ್, ಚರಂಡಿ, ರಸ್ತೆ, ಫುಟ್‍ಪಾತ್ ಕಾಮಗಾರಿಗಳನ್ನು ಗುರುತಿಸಿ ಪರಿಶೀಲಿಸಿದರು.
ಹಾಗೂ ಫುಟ್‍ಪಾತ್, ರಸ್ತೆಯ ಕಾಮಗಾರಿಗಳು ಅಪೂರ್ಣಗೊಂಡಿರುವುದು ಹಾಗೂ ಈಗಾಗಲೇ ದುರಸ್ತಿಯಲ್ಲಿದ್ದು ಸರಿಯಾದ ನಿರ್ವಹಣೆ ಮಾಡದೇ ಇರುವುದನ್ನು ಗಮನಿಸಿದರು ಮತ್ತು ಸದರಿ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಗಳಿಂದ ಮಳೆ ಸಂದರ್ಭದಲ್ಲಿ ನೀರು ನಿಂತು ಹಲವಾರು ಬಡಾವಣೆಗಳಿಗೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಕಂಡು ಬಂದಿದ್ದು, ಸ್ಮಾರ್ಟ್‍ಸಿಟಿ ಯೋಜನೆ ಇಂಜಿನಿಯರ್‍ರವರಿಗೆ ಈ ಕಾಮಗಾರಿಗಳನ್ನು ಪುನರ್ ಪರಿಶೀಲಿಸಿ ಕಾಮಗಾರಿಗಳ ಪೂರ್ಣ ಮಾಹಿತಿಯನ್ನು ನೀಡುವಂತೆ ಪೊಲೀಸ್ ಅಧೀಕ್ಷಕರು ಸೂಚನೆ ನೀಡಿರುತ್ತಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ