ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೊನ್ನರಹಳ್ಳಿ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಯೋಗ ಕೇವಲ ದೈಹಿಕ ಚಟುವಟಿಕೆಯಲ್ಲ,ಅದು ಮನಸ್ಸು ಮತ್ತು ದೇಹವನ್ನು ಬೆಸೆದು ಆಧ್ಯಾತ್ಮದ ಉತ್ತುಂಗಕ್ಕೆ ಕರೆದೊಯ್ಯುವ ಪ್ರಕ್ರಿಯೆಯಾಗಿದೆ ಎಂದು ಶಿಕ್ಷಕ ಎಸ್ ಎಸ್ ಲಾಯದಗುಂದಿ ಹೇಳಿದರು.
ಇನ್ನೋರ್ವ ಶಿಕ್ಷಕ ಮಹಾಂತೇಶ ವಂದಾಲಿ ಮಾತನಾಡುತ್ತಾ, ನಮ್ಮ ಭಾರತೀಯ ಪರಂಪರೆಯ ದೊಡ್ಡ ಕೊಡುಗೆಯಾಗಿರುವ ಯೋಗ ಇಂದು ಜಗತ್ತನ್ನೇ ಆಕರ್ಷಿಸುತ್ತಿದೆ. ಸಾಂಪ್ರದಾಯಿಕ ಯೋಗ ಪದ್ಧತಿ ಇಂದು ವೈಜ್ಞಾನಿಕವಾಗಿ ರೂಪಾಂತರವಾಗಿದೆ. ಯೋಗ ಮತ್ತು ನಿಸರ್ಗ ಚಿಕಿತ್ಸೆ ಎಂಬ ವೈದ್ಯಕೀಯ ಕೋರ್ಸುಗಳು ನಡೆಯುತ್ತಿವೆ ಎಂದರು.
ಶಿಕ್ಷಕರಾದ ಸುಭಾಸ್ ಕಣಗಿ, ಅಶೋಕ ಬಳ್ಳಾ ಮಕ್ಕಳಿಗೆ ಯೋಗ ಧ್ಯಾನ ಮತ್ತು ಪ್ರಾಣಾಯಾಮದ ಚಟುವಟಿಕೆಗಳನ್ನು ಹೇಳಿಕೊಟ್ಟರು. ಪ್ರಭಾರಿ ಮುಖ್ಯಗುರು ಎಂ.ಜಿ. ಬಡಿಗೇರ, ಏಕಲ್ ವಿದ್ಯಾಲಯದ ಫಕೀರಮ್ಮ ಹುಗ್ಗಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ