ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಆಂಜನೇಯ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1.5 ಲಕ್ಷ ಮಂಜೂರು

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಹನುಮನಹಳ್ಳಿ ಗ್ರಾಮದಲ್ಲಿ ದಿನಾಂಕ 23 ಜೂನ್ 2024 ರಂದು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಟ್ಟೂರು ಯೋಜನಾ ಕಚೇರಿ ವ್ಯಾಪ್ತಿಯ ತೊಟ್ಟಿಲು ಮಠ ವಲಯದ ಹನುಮನಹಳ್ಳಿ ಕಾರ್ಯಕ್ಷೇತ್ರದ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣದ್ದಾರಕ್ಕೆ ಧರ್ಮಸ್ಥಳದ ಧರ್ಮಧಿಕಾರಿಗಳು 1,50,000 ರೂಪಾಯಿ ಮೊತ್ತವನ್ನು ಮಂಜೂರು ಮಾಡಿದ್ದು.ಈ ದಿನ ವಿಜಯನಗರ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ರವರು ದೇವಸ್ಥಾನದ ಮುಂದಿನ ಎಲ್ಲಾ ಕೆಲಸ ಕಾರ್ಯಗಳು ಸುಲಲಿತವಾಗಿ ಸಾಗಲಿ ಮಂಜುನಾಥ ಸ್ವಾಮಿಯ ಪ್ರಸಾದ ನಿಮ್ಮ ಗ್ರಾಮದ ದೇವಸ್ಥಾನಕ್ಕೆ ದೊರಕಿದೆ ಎಂಬುವ ಮಾತನ್ನು ಸಮಿತಿ ಸದಸ್ಯರಿಗೂ ಹಾಗೂ ಊರಿನ ಗ್ರಾಮಸ್ಥರಿಗೂ ತಿಳಿಸುವಮೂಲಕ ಡಿ ಡಿ ಯನ್ನು ಸಮಿತಿ ಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಯ ಅಧ್ಯಕ್ಷರು ಡಿ ಭರಮನಗೌಡ್ರು, ತಾಲ್ಲೂಕಿನ ಯೋಜನಾಧಿಕಾರಿ ನವೀನ್ ಕುಮಾರ್, ದೇವಸ್ಥಾನ ಸಮಿತಿ ಅಧ್ಯಕ್ಷರಾದ ಪ್ರಭಾಕರ್,ಬಿ ಬಸವರಾಜ್,ನಿವೃತ್ತ ಶಿಕ್ಷಕರಾದ ಸಿದ್ದಪ್ಪ,ಹಾಗೂ ಊರಿನ ಮುಖಂಡರು ಮತ್ತು ಸಮಿತಿಯ ಉಪಾಧ್ಯಕ್ಷರು ಹಾಗು ಸರ್ವ ಸದಸ್ಯರು,ವಲಯದ ಮೇಲ್ವಿಚಾರಕರಾದ ಜಗದೀಶ್,ಸೇವಾ ಪ್ರತಿನಿಧಿ ರಂಜಿತಾ ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ ಜಿ ರಾಮನಗೌಡ ಚನ್ನಬಸಪ್ಪ ಜಯಪ್ಪ ಸ್ವಾಮಿ ಎಂ ಸುನಿಲ್ ಅಧ್ಯಕ್ಷರು ಕೃಷಿ ಪತ್ತಿನ ಸಹಕಾರ ಸಂಘ ಟಿ ರವಿಗೌಡ ಬೆನಕನಹಳ್ಳಿ ಬಸನಗೌಡ್ರು ಶರಣಪ್ಪ ಮತ್ತಿತರರು ಮುಖಂಡರು ಹಾಗೂ ಮಹಿಳೆಯರು ಹಾಗೂ ಯುವಕರು ಸೇರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ