ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾವು ನಮ್ಮವರು

ಬಾಳ ದಾರಿ ಸಾಗುತಿದೆ ದಿನನಿತ್ಯ ತಪ್ಪದೆ
ಪಯಣದ ಅಂತ್ಯವೂ ಇನ್ನೂ ಕಾಣದಾಗಿದೆ
ಕಷ್ಟ ಸುಖಗಳ ಮನವು ಅನುಭವಿಸಿದೆ
ಕಾರಣ ಸಿಗದೆ ಪಯಣ ಮತ್ತೆ ನಿಂತಿದೆ

ಬದುಕಿನ ಪಯಣದಲ್ಲಿ ಸಿಕ್ಕರು ಹಲವರು
ನೋವು ನಲಿವನು ಕೆಲವರು ಹಂಚಿಕೊಂಡರು
ನಂಬಿದವರು ಮನಕೆ ಖುಷಿಯ ಕೊಟ್ಟರು
ಮಿಕ್ಕವರು ಬೆನ್ನಿಗೆ ಚೂರಿ ಹಾಕಿದರು

ಪ್ರೀತಿ ಪ್ರೇಮದ ಅರ್ಥವೇ ಗೊತ್ತಿಲ್ಲದವರು
ಬದುಕನ್ನೇ ಹಾಳು ಮಾಡಿ ಬೆಂಕಿ ಇಟ್ಟವರು
ಇವುಗಳ ಮಧ್ಯೆ ಬದುಕನ್ನೇ ಮೆಟ್ಟಿ ನಿಂತರು
ಅವರೇ ಸಮಾಜಕ್ಕಾಗಿ ಬದುಕಿದ ಸಾಧಕರು

ಬದುಕು ಒಂದು ನಿಲ್ಲದ ಜಂಜಾಟವು
ಬದುಕಿನಲ್ಲಿ ಬೇಕು ಪ್ರೀತಿ ಸೌಜನ್ಯವು
ನಿಲ್ಲಲಿ ನಾನು ನನ್ನದೆಂಬ ಅಹಂಕಾರವು
ಬೆಳೆಸಿಕೊಳ್ಳಿ ನಾವು ನಮ್ಮವರೆಂಬ ಭಾವನೆಯ

ಪ್ರತಿಯೊಬ್ಬರ ಮೇಲೆ ನಂಬಿಕೆ ಇಡಬೇಡಿರಿ
ಹಾಗಂತ ಎಲ್ಲರೂ ಕೆಟ್ಟವರಲ್ಲ ಅರಿಯಿರಿ
ಒಳ್ಳೆಯವರಿಗೂ ಕೆಟ್ಟವರಿಗೂ ಒಳ್ಳೆಯವರಾಗಿ ಬದುಕಿರಿ ಮನುಷ್ಯನನ್ನು ಮನುಷ್ಯನಂತೆ ಅನುದಿನ ನಂಬಿರಿ

-ಶ್ರೀ ಮುತ್ತು ಯ ವಡ್ಡರ
ಶಿಕ್ಷಕರು
ಬಾಗಲಕೋಟ
9845568484

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ