ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ದಿನಾಂಕ 29 ಜೂನ್ 2024 ರಂದು ಕೊಟ್ಟೂರು ಯೋಜನಾ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಭಾಗೀರತಿ ಪದವಿ ಪೂರ್ವ ಕಾಲೇಜ್ ಸಹಬಾಗಿತ್ವದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿಯವರಾದ ನವೀನ್ ಕುಮಾರ್ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಟಪರಿಣಾಮಗಳ ಬಗ್ಗೆ ತಿಳಿಸಿದರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆವತಿಯಿಂದ ಮದ್ಯ ವರ್ಜನಾ ಶಿಬಿರಗಳನ್ನು ಮಾಡಲಾಗುತ್ತಿದೆ.ಮೂಗ ಬಸವೇಶ್ವರ ಆಸ್ಪತ್ರೆಯ ವೈದ್ಯರಾದಂತಹ ಡಾ.ಮೂಗಬಸಪ್ಪ ರವರು ಬೀಡಿ, ಸಿಗರೇಟ್ ಸೇವನೆ,ಮದ್ಯಪಾನ,ಡ್ರಗ್ಸ್ ಸೇವನೆಯಿಂದ ಕ್ಯಾನ್ಸರ್ ಕಾಯಿಲೆ ಬರುತ್ತದೆ ಇದನ್ನು ವಾಸಿಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ಮಕ್ಕಳು ಓದಿನ ಕಡೆ ಹೆಚ್ಚು ಗಮನ ನೀಡಬೇಕು ಅಮಲು ಪದಾರ್ಥಗಳಬಗ್ಗೆ ಗಮನನಿಡಬಾರದೆಂದು ತಿಳಿಸಿದರು.ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ರೇವಣಸಿದ್ದಪ್ಪರವರು ಮಕ್ಕಳಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಸಮಾಜದಲ್ಲಿ ಗೌರವ ಸಿಗುವುದಿಲ್ಲವೆಂದು ತಿಳಿಸಿದರು.ಶ್ರೀಮತಿ ನಿರ್ಮಲ ಶಿವನಗುತ್ತಿಯವರು ಮಕ್ಕಳು ಮಾದಕ ವಸ್ತುಗಳನ್ನು ಸೇವನೆ ಮಾಡಿ ದುಶ್ಚಟಕ್ಕೆ ಬಲಿಯಾಗಿ ವಿದ್ಯಾಭ್ಯಾಸವನ್ನು ಹಾಳುಮಾಡಿಕೊಳ್ಳದೆ ಮನೆಯಲ್ಲಿ ಒಳ್ಳೆಯ ಸಂಸ್ಕಾರ ಕಲಿತು ಸಮಾಜದಲ್ಲಿ ಉತ್ತಮವ್ಯಕ್ತಿ ಆಗಬೇಕೆಂದು ತಿಳಿಸಿದರು.ಕಾರ್ಯಕ್ರಮ ದಲ್ಲಿ ಮೇಲ್ವಿಚಾರಕರಾದ ರುದ್ರೇಶ್,ಕೃಷಿ ಅಧಿಕಾರಿ ಮಹಾಂತೇಶ, ಸೇವಾ ಪ್ರತಿನಿಧಿಗಳಾದ ಸುಧಾ,ಲಕ್ಷ್ಮಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ವರದಿ:ವೈ.ಮಹೇಶ್ ಕುಮಾರ್ ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ