ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಯುವ ಮುಖಂಡ ಮುಜೀಬ್ ಜುನೈದಿ ಒತ್ತಾಯ

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ಮುಜೀಬ್ ಜುನೈದಿ ಅವರು ಒತ್ತಾಯಿಸಿದ್ದಾರೆ.
ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ‌. ಇವರು ಯಾವುದೇ ಅಧಿಕಾರಕ್ಕೆ ಆಸೆ ಪಡೆದೆ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಸಲ್ಲಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ಎಪಿಎಂಸಿ, ಜಿಪಂ, ತಾಪಂ, ಪುರಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಎಂದರು
ಇದೀಗ ಹಾಲಿ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಜಾತಿಗಳ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸಗಳಿಸಿದ್ದಾರೆ. ಹೀಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಕ್ತಾರ್ ಪಟೇಲ್ ಅವರ ಸೇವೆಯನ್ನು‌ ಪರಿಗಣಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ