ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೀಡ್ ಬೇಸ್ ಇಂಡಿಯಾ ಸಂಸ್ಥೆಯಿಂದಕಲಮಂಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸಿಂಧನೂರು:ನೀಡ್ ಬೇಸ್ ಇಂಡಿಯಾ ವತಿಯಿಂದ ತಾಲೂಕಿನ ಕಲಮಂಗಿ ಗ್ರಾಮದ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ಮಕ್ಕಳ ಆರೈಕೆ, ಹಕ್ಕುಗಳ ರಕ್ಷಣೆ, ಶಿಕ್ಷಣ, ಸಬಲೀಕರಣ, ಅವಶ್ಯಕತೆಗಳಿಗೆ ಮೀಸಲಾಗಿರುವ ಬೆಂಗಳೂರು ಮೂಲದ ನೀಡ್ ಬೇಸ್ ಇಂಡಿಯಾ ಸಂಸ್ಥೆಯು ಪ್ರತಿ ವರ್ಷ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಈ ಸಾಲಿನಲ್ಲಿ 8, 9 ಮತ್ತು 10ನೇ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ಕಲಮಂಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಲ್ಲಾ 92 ವಿದ್ಯಾರ್ಥಿಗಳಿಗೆ ತಲಾ 5 ನೋಟ್ ಪುಸ್ತಕಗಳನ್ನು ಸಂಸ್ಥೆಯ ವತಿಯಿಂದ ನೀಡಿದ್ದು, ಈ ಕಾರ್ಯಕ್ಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಮಲ್ಲಪ್ಪ ಬಾದರ್ಲಿ ಸಂಸ್ಥೆಯನ್ನು ಅಭಿನಂದಿಸಿ, ಕೊಟ್ಟಿರುವ ಪುಸ್ತಕಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡು ಅಭ್ಯಾಸ ಮಾಡಬೇಕು ಎಂದರು.ಇಂಗ್ಲಿಷ್ ಭಾಷಾ ಶಿಕ್ಷಕ ವೀರೇಶ ಗೋನವಾರ ಮಾತನಾಡಿ, ಕಳೆದ ಮೇ ತಿಂಗಳಿನಲ್ಲಿ ವೆಬ್ ಲಿಂಕ್ ಮೂಲಕ ಮಾಹಿತಿಯನ್ನು ಕೇಳಿದ್ದರು, ಮಾಹಿತಿಯನ್ನು ಭರ್ತಿ ಮಾಡಿದ ಹಿನ್ನಲೆಯಲ್ಲಿ, ಶಾಲೆಯೊಂದಿಗೆ ಸಂಪರ್ಕವನ್ನು ಸಾಧಿಸಿ ಶಾಲೆಗೆ ಬೇಕಾಗಿರುವ ಉಚಿತ ನೋಟ್ ಪುಸ್ತಕಗಳನ್ನು ನೀಡಿರುವುದು ತುಂಬಾ ಶ್ಲಾಘನೀಯ. ಇಂತಹ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಸಮುದಾಯ, ಸಂಘ-ಸಂಸ್ಥೆಗಳು, ಉದ್ಯಮಿಗಳಿಂದ ನಡೆದರೆ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಷ ಪತ್ತಾರ, ಎಂ.ಮಾರುತಿ, ರೂಪಾ, ಬಸವರಾಜ ಮತ್ತು ಸಿಬ್ಬಂದಿಗಳಾದ ರೂಪಾ ಕರ್ಣೆ, ಮುಂಜುನಾಥ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ