ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವರ್ಗಾವಣೆ ಆದೇಶ ರದ್ದುಪಡಿಸಿ

ಬೀದರ:ಜಿಲ್ಲೆಯ ಖಡಕ್ ಪೊಲೀಸ್ ಆಫೀಸರ್ ಎಂದೇ ಹೆಸರಾಗಿದ್ದ ಶ್ರೀ ಚನ್ನಬಸವಣ್ಣ ಲಂಗೋಟಿ ಐಪಿಎಸ್ ಅಧಿಕಾರಿ ಅವರ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಸಾಹಿತಿ,ಹೋರಾಟಗಾರರಾದ ಸಂಗಮೇಶ್ ಎನ್ ಜವಾದಿಯವರು ಸರ್ಕಾರಕ್ಕೆ ವಿನಂತಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀದರ್ ಜಿಲ್ಲೆಯನ್ನು ಸಮಗ್ರ ಅಪರಾಧ ಮುಕ್ತ ಮಾಡುವ ನಿಟ್ಟಿನಲ್ಲಿ ನಮ್ಮ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಚನ್ನಬಸವಣ್ಣ ಲಂಗೋಟಿ ಸರ್ ಅವರು ಹತ್ತಾರು ಹೊಸ ಯೋಜನೆಗಳನ್ನು ಹಾಕಿಕೊಂಡು ಜಿಲ್ಲೆಯನ್ನು ಅಪರಾಧ ಮುಕ್ತ ಮಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ.ಅಲ್ಲದೆ SP Bidar clean hand officer ಆದ ಇವರನ್ನು ಬೀದರ್ ಜಿಲ್ಲೆಯಿಂದ ವರ್ಗಾವಣೆ ಮಾಡುವುದು ಸರಿಯಲ್ಲ ಎನ್ನುವುದು ಇಡೀ ಬೀದರ್ ಜಿಲ್ಲೆಯ ಜನತೆಯ ಆಗ್ರಹ, ಜಿಲ್ಲೆಯ ಹಲವು ಪ್ರಜ್ಞಾವಂತರ ಪಾಲಿಗೆ ಇದು ನಿರಾಶೆಯ ಭಾವನೆ ಉಂಟು ಮಾಡಿದ್ದು ಅಲ್ಲದೆ ಬೀದರ್ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಬದಲಾವಣೆ ಬೀಸುತ್ತಿರುವ ಸಮಯದಲ್ಲಿ ಈ ವರ್ಗಾವಣೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಅಪರಾಧ ಮುಕ್ತ ಮಾಡುವ ಜಿಲ್ಲೆಯ ಗುರಿಯನ್ನು ಕುಸಿತಗೊಳಿಸುತ್ತದೆ. ಇವರ ಆಡಳಿತ ಕಾಲಾವಧಿಯಲ್ಲಿ ಅಕ್ರಮ ದಂಧೆಗಳು ಬಹುತೇಕ ಹತೋಟಿಗೆ ಬಂದು, ಇನ್ನು ಮುಂದೆ ತಮ್ಮ ಕಳ್ಳಾಟ ನಡೆಯುವುದಿಲ್ಲ ಎಂದು ಬಾಲ ಮುದುಡಿಕೊಂಡಿದ್ದ ಕಳ್ಳದಂಧೆ ಕೋರರು ಖುಷಿಪಡುವಂತಾಗಿದೆ‌. ಕಾರಣ ಈ ವರ್ಗಾವಣೆಯನ್ನು ದಯವಿಟ್ಟು ರದ್ದುಗೊಳಿಸಬೇಕೆಂದು ಸಂಗಮೇಶ ಎನ್ ಜವಾದಿ ಯವರು ವಿನಂತಿಸಿಕೊಂಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ