ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಚಾರಿ ಪೋಲಿಸ್ ಠಾಣೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸಂಚಾರಿ ಪೋಲಿಸ್ ಠಾಣೆಯ ಅವರಣದಲ್ಲಿ ಕರ್ನಾಟಕ ಸರ್ಕಾರ ಪ್ರಾದೇಶಿಕ ಅರಣ್ಯ ವಲಯ, ಹಾಗೂ ಸಮಾಜಿಕ ಅರಣ್ಯ ಇಲಾಖೆ,ಸಂಚಾರಿ ಪೋಲಿಸ್ ಇಲಾಖೆ,ನಗರ ಪೊಲೀಸ್ ಇಲಾಖೆ ಹಾಗೂ ಗ್ರಾಮೀಣ ಪೊಲೀಸ ಇಲಾಖೆ ಮತ್ತು ವನಸಿರಿ ಫೌಂಡೇಶನ್ ವತಿಯಿಂದ ಸಿಂಧನೂರು ಸಂಚಾರಿ ಪೋಲಿಸ್ ಠಾಣೆಯ ಅವರಣದಲ್ಲಿ 100 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನ ಸಿಂಧನೂರಿನ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರು ಉದ್ಘಾಟನೆ ಮಾಡಿದರು.

ಈ ಸಂಧರ್ಭದಲ್ಲಿ ಮಾನ್ಯ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ,DYSP BS ತಳವಾರ ಸಿಂಧನೂರು ಉಪ ವಿಭಾಗ, ತಹಶೀಲದಾರ ಅರುಣ್ ದೇಸಾಯಿ, PI ಸುಧೀರ್ ಬೆಂಕಿ, ನಗರ ಠಾಣೆ ಸಿಂಧನೂರು, ನಗರ ಸಭೆ ಆಯುಕ್ತರು ಮಂಜುನಾಥ ಗುಂಡೂರು, ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಸುರೇಶ ಆಲಮೇಲ್ (RFO),ಟ್ರಾಫಿಕ್ PSI ವೆಂಕಟೇಶ್ ಚೌಹಾಣ್,ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ, ತಾಲೂಕು ಪಂಚಾಯತ್ ಅಧಿಕಾರಿ ಚಂದ್ರಶೇಖರ ಪಾಟೀಲ್,ಕೃಷಿ ಅಧಿಕಾರಿ ನಜೀರ್ ಅಹ್ಮದ್,ಸಂಚಾರಿ ಪೊಲೀಸ್ ಠಾಣೆಯ PSI ಕೆ.ಕುಮಾರಸ್ವಾಮಿ,ಸನ್ ರೈಸ್ ಕಾಲೇಜು ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು, ಸಂಚಾರಿ ಪೋಲೀಸ್ ಸಿಬ್ಬಂದಿಗಳು,ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಶ್ರೀಮತಿ ಮಲ್ಲಿಕಾ,ಮತ್ತು ಮಹೆಬೂಬ್ ಸಾಬ್,ವನಸಿರಿ ಫೌಂಡೇಶನ್ ಸದಸ್ಯರಾದ ಗಿರುಸ್ವಾಮಿ ಹೆಡಗಿನಾಳ,ರಾಜು ಪತ್ತಾರ ಬಳಗಾನೂರ, ಯಂಕೋಬ ನಾಯಕ ಬೂತಲದಿನ್ನಿ,ಮುದುಕಪ್ಪ ಹೊಸಳ್ಳಿ ಕ್ಯಾಂಪ್ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ