ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ:ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಚೌದರಿ

ಪಾವಗಡ :ಜನಸಾಮಾನ್ಯರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಬೇಕು. ಅವರು ಅರೋಗ್ಯವಂತರಾಗಿರಲು ಶಿಬಿರದ ಮೂಲಕ ಹೆಲ್ಪ್ ಸೊಸೈಟಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿರುಮಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಚೌದರಿ ತಿಳಿಸಿದರು.
ಹೆಲ್ಪ್ ಸೊಸೈಟಿ ಪಾವಗಡ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಿರುಮಣಿ ಗ್ರಾಮದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಪಾವಗಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯದ್ಯಾತ ಹೆಲ್ಪ್ ಸೊಸೈಟಿ ತಂಡ ಉಚಿತ ಕಣ್ಣನ ತಪಾಸಣೆ, ಕಾನ್ಸರ್ ತಪಾಸಣೆ ಹಾಗೂ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಕಾರ್ಯಕ್ರಮಗಳು ಯಶಶ್ವಿಯಾಗಿ ನಡೆಯುತ್ತಿವೆ.ಪ್ರಾಥಮಿಕ ಹಂತದಲ್ಲಿ ಆರೋಗ್ಯದ ಬಗ್ಗೆ ಜನರು ಹೆಚ್ಚು ಕಾಳಜಿ ವಹಿಸಿಕೊಳ್ಳಬೇಕು ಆಗ ಮುಂದಿನ ರೋಗಗಳು ಎದುರಾಗದಂತೆ ನೋಡಿಕೊಳ್ಳಬಹುದು ಎಂದು ಹೇಳಿದರು.
ಶಿಬಿರದಲ್ಲಿ ತಿರುಮಣಿ ಅರೋಗ್ಯ ನಿರೀಕ್ಷಕರು ರಮೇಶ್ ಮಾತನಾಡುತ್ತ ತಮ್ಮಲ್ಲಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರೊಂದಿಗೆ ಸಮಾಲೋಚನೆ ಮಾಡಿದಾಗ ನಮ್ಮ ದೇಹದ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಹಮ್ಮಿಕೊಂಡಿರುವ ಇಂತಹ ಶಿಬಿರಗಳಿಂದ ಸಾಧ್ಯವಾಗಲಿವೆ ಎಂದರು. ಶಿಬಿರದ ಪ್ರಯೋಜಕರಾದ ಮಾನಂ ಶಶಿಕಿರಣ್ ಮಾತನಾಡುತ್ತಾ ರಾಜ್ಯಾದ್ಯಂತ ಡೆಂಗು ಜ್ವರ ಕಾಣಿಸಿಕೊಳ್ಳುತ್ತಿದ್ದೂ ಗ್ರಾಮಗಳಲ್ಲಿ ನಾಗರಿಕರು ತಮ್ಮ ಮನೆ ಸುತ್ತ ಮುತ್ತ ಸ್ವಚ್ಛತೆ ಕಾಪಾಡಬೇಕೆಂದು ಹಾಗೂ ತಾಲ್ಲೂಕು ಅರೋಗ್ಯ ಇಲಾಖೆ ಮುಖ್ಯಸ್ಥರೊಂದಿಗೆ ಚರ್ಚಿಸಿ ಡೆಂಗು ಕಾಯಿಲೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತ ಕಾರ್ಯಕ್ರಮವನ್ನು ಹೆಲ್ಪ್ ಸೊಸೈಟಿ ಸಂಸ್ಥೆ ಮಾಡಲಿದೆ ಎಂದು ತಿಳಿಸಿದರು.ಶಿಬಿರದಲ್ಲಿ ಡಾ. ಶ್ರೀಕಾಂತ್,ಡಾಕ್ಟರ್ ಲಯ, ಡಾಕ್ಟರ್ ನವೀನ್ ಕುಮಾರ್, ಡಾಕ್ಟರ್ ನಂದಿನಿ, ಡಾಕ್ಟರ್ ಉಷಾ, ಮುಖಂಡರಾದ ನರಸಿಂಹಮೂರ್ತಿ, ಸುರೇಂದ್ರ, ನರೇಶ್ ಕುಮಾರ್, ಲೋಕೇಶ್, ಗೋಪಾಲ್, ರವಿಕುಮಾರ್, ಮಂಜುನಾಥ ಮತ್ತು ಈ ಶಿಬಿರಕ್ಕೆ ರಾಯಚೇರ್ಲು ಮುಖಂಡರಾದ R V ನಾಯ್ಡು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!