ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಾಲು ಉತ್ಪಾದಕರು ಹಾಗೂ ಭಾರತ ಕಿಸಾನ್ ಸಂಘ ವತಿಯಿಂದ ದಿಢೀರ್ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘ (ರಿ.)ಸಮೂಹ ಹಾಲು ಶಿಥಲೀಕರಣ ಕೇಂದ್ರ ಮುಂಭಾಗ ಹಾಲು ಉತ್ಪಾದಕರು ಹಾಗೂ ಭಾರತ ಕಿಸಾನ್ ಸಂಘ ವತಿಯಿಂದ ದಿಢೀರ್ ಪ್ರತಿಭಟನೆ ಜರುಗಿತು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,
ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅನ್ಯ ವ್ಯಕ್ತಿಗಳ ಖಾತೆಗೆ ಲಕ್ಷಾಂತರ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ಅವ್ಯವಹಾರ ನಡೆಸಿದ್ದಾರೆ.ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ ಹೀಗಾಗಿ ವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಅಲ್ಲಿಯ ತನಕ ಅಧ್ಯಕ್ಷ ರಾಜಕಣ್ಣ ಹಾಗೂ ಕಾರ್ಯದರ್ಶಿ ಮದಲೈಮುತ್ತು ಅವರು ಹುದ್ದೆ ಹಿಂದೆ ಸರಿಯಬಾರದು, ಕಡತಗಳನ್ನು ನಾಶ ಮಾಡಬಾರದು, ಪ್ರತಿಭಟನೆಯ ಒತ್ತಾಯವನ್ನು ಸಭಾ ನಡವಳಿಯಲ್ಲಿ ದಾಖಲು ಆಗಲೇಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಶಾಹುಲ್ ಅಹಮ್ಮದ್ ಹಾಗೂ ಉದ್ದನೂರು ಮಹದೇವಸ್ವಾಮಿ, ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ರಾಜಕಣ್ಣ, ಕಾರ್ಯದರ್ಶಿ ಮೊದಲೈಮುತ್ತು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಅನ್ಯಾಯಕ್ಕೆ ತನಿಖೆ ಮಾಡಿಸಲು ಅಗತ್ಯ ಕ್ರಮವಹಿಸಲಾಗುವುದು, ಬೇಡಿಕೆಗಳಂತೆ ನಡೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು.
ಪ್ರತಿಭಟನೆಯಲ್ಲಿ ಭಾರತ್ ಕಿಸನ್ ಸಂಘದ ಮುಖಂಡರಾದ ಡಾನ್ ಬೊಸ್ಕೊ, ಮಲ್ಲಿಕಾರ್ಜುನ, ಮಣಿಗಾರ ಪ್ರಸಾದ್ ಹಾಗೂ ತೋಮಿಯರ್ ಪಾಳ್ಯ ಹಾಲು ಉತ್ಪಾದಕರು ಚಾರ್ಲೆಸ್, ಸಾಗಯರಾಜ್, ಜ್ಞಾನ ಪ್ರಕಾಶ್, ಚಾರ್ಲೆಸ್, ಜಾನ್, ಪತ್ತಿನಾಧನ್, ಮಂಗಳ, ಚಾರ್ಲ್ಸ್ ಸೇರಿದಂತೆ ಮಹಿಳೆಯರು ಒಳಗೊಂಡು ನೂರಾರು ಹಾಲು ಉತ್ಪಾದಕರು ಪಾಲ್ಗೊಂಡಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ