ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅವೈಜ್ಞಾನಿಕವಾಗಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಯ ಎದುರು ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನ ಅವೈಜ್ಞಾನಿಕವಾಗಿದೆ ಎಂದು ರುದ್ರೇಶ್ ದಿಡಗೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿಎಸ್ಎಸ್ ಇವರು ಆರೋಪ ಮಾಡಿದ್ದಾರೆ.
ಈ ಭವನವು ಮುಖ್ಯ ರಸ್ತೆಯ ಪಕ್ಕದಲ್ಲಿ ನಿರ್ಮಾಣ ಮಾಡಿದ್ದಾರೆ ಆದರೆ ಈ ಭವನ ರಸ್ತೆಯ ಮಟ್ಟಕ್ಕಿಂತ ತೆಗ್ಗು ಪ್ರದೇಶದಲ್ಲಿ ನಿರ್ಮಾಣವಾಗಿದೆ ಅಂದು ನಿರ್ಮಾಣ ಮಾಡುವಾಗ ರಸ್ತೆಯ ಮಟ್ಟಕ್ಕೆ ಎತ್ತರವಾಗಿ ಅಡಿಪಾಯ ಮಾಡಬಹುದಿತ್ತು ಆದರೆ ಆ ರೀತಿ ನಿರ್ಮಾಣ ಮಾಡದೆ ಇರುವುದು ಈ ದುರವಸ್ಥೆಗೆ ಕಾರಣವಾಗಿದೆ ರಸ್ತೆಯ ಪಕ್ಕದಲ್ಲಿರುವ ಕಾಲುವೆಯ ಕೊಳಚೆ ನೀರು,ಭವನದ ಎದುರು ಹರಿದು ಬಂದು‌ ಭವನದ ಪಕ್ಕ ನಿಲ್ಲುತ್ತದೆ ಅದಲ್ಲದೇ ಈ ಭವನವು ತೆಗ್ಗು ಪ್ರದೇಶದಲ್ಲಿ ಇರುವುದರಿಂದ ರಸ್ತೆಯಿಂದ ಹರಿದು ಬರುವ ನೀರು ಭವನದ ಕಡೆ ಹರಿದು ಬರುತ್ತದೆ ಆದ್ದರಿಂದ ಮುಂದಿನ ದಿನಗಳಲ್ಲಿ ಕಟ್ಟಡಕ್ಕೆ ತೊಂದರೆ ಆಗುತ್ತದೆ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಿರುವ ಈ ಭವನ ಸಾರ್ವಜನಿಕ ಉಪಯೋಗಕ್ಕೆ ಬಾರದೆ ಹೋದರೆ ಸರ್ಕಾರದ ಹಣ ವ್ಯರ್ಥವಾಗುತ್ತದೆ ಆದ್ದರಿಂದ ತಾಲೂಕ ಆಡಳಿತ ಇತ್ತ ಕಡೆ ಗಮನಹರಿಸಿ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕು ಇಲ್ಲವಾದರೆ ಮುಂದೊಂದು ದಿನ ಸಂಬಂಧಪಟ್ಟ ಇಲಾಖೆಯ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

ವರದಿ-ಪ್ರಭಾಕರ ಡಿ.ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ