ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಹೆಚ್.ವಿ.ವೆಂಕಟೇಶ್

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ 8,12,19 ಈ ಬಡಾವಣೆಗಳಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ನಿಧಿಯ ಅನುದಾನದಲ್ಲಿ ಸುಮಾರು 1.50 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಹೆಚ್.ವಿ.ವೆಂಕಟೇಶ್ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ನಂತರ ಸುಮಾರು ರೂ. 2.50/-ಕೋಟಿ ವೆಚ್ಚದಲ್ಲಿ ಪಟ್ಟಣದ ಗಂಗಮ್ಮ ದೇವಸ್ಥಾನ ಬಡವಾಣೆಯಲ್ಲಿ ಸಜ್ಜಿತವಾಗಿ ನಿರ್ಮಾಣವಾಗಿರುವ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ಮಾಜಿ ಸಚಿವ ವೆಂಕಟರಮಣಪ್ಪ ಹಾಗೂ ಶಾಸಕರಾದ ಹೆಚ್. ವಿ ವೆಂಕಟೇಶ್ ಉದ್ಘಾಟನೆಗೊಳಿಸಿ ಲೋಕಾರ್ಪಣೆ ಮಾಡಿದರು.

ಶಾಸಕರಾದ ಹೆಚ್.ವಿ.ವೆಂಕಟೇಶ್ ಮಾತನಾಡಿ ಹಂತ ಹಂತವಾಗಿ ಉದ್ಘಾಟನೆಗೆ ರೆಡಿಯಾದಂತಹ ಎಲ್ಲಾ ಕಾಮಗಾರಿಗಳನ್ನು ಬೇಗನೆ ಲೋಕಾರ್ಪಣೆ ಮಾಡುತ್ತೇವೆ ಅದರ ಜೊತೆಗೆ ಇಂದು ಕೆಂಚಮನಹಳ್ಳಿ ಗೇಟ್ ಬಳಿ ಹೋಗಿ ತುಂಗಭದ್ರಾ ಯೋಜನೆಯ ಕುಡಿಯೋ ನೀರು ಪ್ರಾರಂಭ ಮಾಡೋಣ ಎಂದರು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಸಮಾಜ ಸೇವಕ ಬತ್ತೀನೇನಿ ನಾನಿ, ಪುರಸಭೆ ಮಾಜಿ ಅಧ್ಯಕ್ಷ ಶಂಕರ್ ರೆಡ್ಡಿ, ಪುರಸಭೆ ಸದಸ್ಯರುಗಳಾದ ರಾಜೇಶ್,ರವಿ,ವೇಲುರಾಜು,ಗೊರ್ತಿ ನಾಗರಾಜ್, ಗುತ್ತಿಗೆದಾರ ಆರ್ ಎ ಹನುಮಂತರಾಯಪ್ಪ,ಸಾಗರ್, ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ ,ಗೊರ್ತಿ ನಾಗರಾಜ್ ,ರೈತ ಸಂಘ ಅಧ್ಯಕ್ಷ ಜಿ ನರಸಿಂಹ ರೆಡ್ಡಿ ಸೇರಿದಂತೆ ಮುಖಂಡರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ