ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿಡಗೂರು ಗ್ರಾಮಕ್ಕೆ ವಿಶ್ವಕರ್ಮ ಶ್ರೀಗಳ ಆಗಮನ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮಕ್ಕೆ ಇಂದು ಶ್ರೀ ಸಾವಿತ್ರಿ ಪೀಠಾಧೀಶ್ವರ ಜಗದ್ಗುರು ಪರಮಪೂಜ್ಯ ಅಷ್ಟೋತ್ತರ ಶತಶ್ರೀ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ಕಾಶೀ ಮಠ,ವಡ್ಡನಳ್, ಚನ್ನಗಿರಿ ತಾಲೂಕು ಶ್ರೀಗಳು ಗ್ರಾಮಗಳಲ್ಲಿರುವ ಪುರಾತನ ದೇವಸ್ಥಾನಗಳ ವೀಕ್ಷಣೆ ಮತ್ತು ಶಿಥಿಲಗೊಂಡಿರುವ ದೇವಸ್ಥಾನಗಳಿಗೆ ಜೀರ್ಣೋದ್ಧಾರ ಮಾಡಲು ಸಲಹೆ ಮಾಡುತ್ತಾ ಸಂಚಾರ ಮಾಡುತ್ತಿದ್ದಾರೆ ಅದರ ನಿಮಿತ್ತ ಇಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರಿನಲ್ಲಿ ಇರುವ ಪುರಾತನ ಕಾಲದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಶಿಥಿಲಾವಸ್ಥೆಯಲ್ಲಿ ಇರುವುದನ್ನು ವೀಕ್ಷಣೆ ಮಾಡಿ ಜೀರ್ಣೋದ್ಧಾರ ಮಾಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಿಡಗೂರಿನ ಗ್ರಾಮಸ್ಥರು ಮತ್ತು ವಿಶ್ವಕರ್ಮ ಸಮಾಜದ ಬಾಂಧವರು ಮತ್ತು ಮಹಿಳೆಯರು ಅವರನ್ನು ಆರತಿ ಬೆಳಗಿ ಸ್ವಾಗತಿಸಿದರು.
ಶ್ರೀಗಳು ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಆರ್ಥಿಕ ಸಹಾಯ ಮಾಡುತ್ತಾರೆ ಮತ್ತು ನಿಮ್ಮ ಗ್ರಾಮದ ಆರ್ಥಿಕ ಸಹಾಯದಿಂದ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎಂ ಬಿ ಹನುಮಂತಪ್ಪ, ಎಸ್ ಎನ್ ಸಿದ್ದೇಶ್, ಅಣ್ಣಪ್ಪ ಸ್ವಾಮಿ, ವೀರಭದ್ರ ಪ್ಪ, ಪರಮೇಶಾಚಾರ್, ಅಣ್ಣಪ್ಪ ಸೇರಿದಂತೆ ಅನೇಕ ಗ್ರಾಮಸ್ಥರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ವರದಿ ಪ್ರಭಾಕರ್ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ