ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ ವತಿಯಿಂದ ಪ್ರೌಢಶಾಲೆಗಳಿಗೆ ಸ್ವಚ್ಚ ಮಾಡುವ ಜಟ್ಟಿಂಗ್ ಮಷಿನ್ ವಿತರಣೆ

ಯಾದಗಿರಿ:ಶಾಲೆಗಳಲ್ಲಿ ಶೌಚಾಲಯ ಶುಚಿತ್ವ ಸೇರಿದಂತೆ ಶಾಲೆಯಲ್ಲಿನ ವಾತಾವರಣದ ಸುತ್ತ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ ವತಿಯಿಂದ ಸಿಎಸ್ಆರ್ ಅನುದಾನದಡಿ ಜಿಲ್ಲೆಯ 55 ಪ್ರೌಢಶಾಲೆಗಳಿಗೆ ಸ್ವಚ್ಚ ಮಾಡುವ ಜಟ್ಟಿಂಗ್ ಮಷಿನ್ ನೀಡುತ್ತಿದ್ದು,ಸಾಂಕೇತಿಕವಾಗಿ ಶಿಕ್ಷಕರಿಗೆ ವಿತರಣೆ ಮಾಡಿ ಅವರು ಮಾತನಾಡುತ್ತಾ

ಇತ್ತೀಚಿಗೆ ಡೆಂಗ್ಯೂ ಭೀತಿ ಎದುರಾಗಿದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಗರಿಮಾ ಪನ್ವಾರ, ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆಯ ಜನರಲ್ ಮ್ಯಾನೇಜರ್ ಕೃಷ್ಣಮೂರ್ತಿ, ಸೀನಿಯರ್ ಮ್ಯಾನೇಜರ್ ಯೋಗೀಶಕುಮಾರ, ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ಶಿಕ್ಷಕರಾದ ಹನುಮಯ್ಯ ಕಲಾಲ್, ರಾಮಸಮುದ್ರ ಪ್ರೌಡಶಾಲೆಯ ಮುಖ್ಯ ಗುರುಗಳಾದ ಬಿ ರಾಜಶೇಖರಗೌಡ, ಕನ್ಯಾಪ್ರೌಢ ಶಾಲೆಯ ಮುಖ್ಯಗುರು ವೀರಪ್ಪ ಕನ್ನಳ್ಳಿ, ಗುರುಮಿಠಕಲ್ ಉರ್ದು ಮಹಿಳಾ ಪ್ರೌಢಶಾಲೆಯ ಹಣಮಂತರಾವ್ ಗೋಂಗಲೆ , ಸಿಬ್ಬಂದಿ ವಿಶಾಲ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ