ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಾತಾವರಣ ಹಾಳು-ಸಾರ್ವಜನಿಕರ ಕೇಳೋರು ಯಾರು…??

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿ ಬಡಾವಣೆಯೋ ಅಥವಾ ಹಳ್ಳ-ಕೊಳ್ಳವೋ ಎಂದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ ಏಕೆಂದರೆ ಜನ ವಸತಿ ಬಡಾವಣೆ ಆಗಿದ್ದರೂ ಡ್ರೇನೇಜ್ ಇಲ್ಲ,ವಿದ್ಯುತ್ ದೀಪಗಳಿಲ್ಲ,ಯಾವುದೇ ಪ್ರಾಣಿಗಳು ಮೃತ ಪಟ್ಟರೆ ತೆರವುಗೊಳಿಸುವುದಿಲ್ಲ ಇದಕ್ಕೆ ಪ್ರಮುಖವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಿರ್ಲಕ್ಷವೇ ಕಾರಣವೆಂದು ಬಡಾವಣೆಯಲ್ಲಿ ವಾಸಿಸುವ ಜನರು ಉಗಿಯುತ್ತಿದ್ದಾರೆ.ನಿನ್ನೆ ಬೆಳಿಗ್ಗೆ ಏಳು ಗಂಟೆಗೆ ಬಡಾವಣೆಯಲ್ಲಿ ಹಂದಿ ಸತ್ತುಬಿದ್ದು ಗಬ್ಬು ನಾರುತ್ತಿದ್ದು ಮತ್ತು ಇತರೆ ಪ್ರಾಣಿಗಳು ಬಿಸಾಡಿ ತಿನ್ನುತ್ತಿರುವುದು ಬಡಾವಣೆ ಜನ ನೋಡಿ ಅಧಿಕಾರಿಗಳಲ್ಲಿ ಮತ್ತು ಸಿಬ್ಬಂದಿಯವರಿಗೆ ತಿಳಿಸಿದರೂ ಯಾವುದೇ ರೀತಿಯಾಗಿ ಸ್ಪಂದನೆ ಮಾಡದೆ ಕರ್ತವ್ಯ ಲೋಪ ಎಸಗಿದ್ದಾರೆ. ಸತ್ತ ಪ್ರಾಣಿಯಲ್ಲಿ ಹಲವಾರು ರೀತಿಯ ಬ್ಯಾಕ್ಟೀರಿಯಾ ಮತ್ತು ವೈರಸ್ ಗಳಿಂದ ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆಯಾದರೆ ಯಾರು ಹೊಣೆ ಇಂತಹ ಘಟನೆಗಳು ಮೇಲಾಧಿಕಾರಿಗಳ ಗಮನಕ್ಕೆ ಬರೋದಿಲ್ವಾ ಎಂದು ಬಡಾವಣೆಯ ಜನರು ಕರುನಾಡ ಕಂದ ಪತ್ರಿಕೆ ಮುಂದೆ ಅಧಿಕಾರಿಗಳ ಬೇಜವಾಬ್ದಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ