ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

12ನೇ ಶತಮಾನದ ಸಾಮಾಜಿಕ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಕೂಡಾ ಒಬ್ಬರಾಗಿದ್ದರು:ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು

ಕಲಬುರಗಿ/ಚಿತ್ತಾಪುರ:
12ನೇ ಶತಮಾನದ ಸಾಮಾಜಿಕ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಕೂಡಾ ಒಬ್ಬರಾಗಿದ್ದರು ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಅವರು ರಾವೂರ ಗ್ರಾಮದ ಶ್ರೀಮಠದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಬಸವಣ್ಣನವರ ಬಲಗೈ ಬಂಟರಾಗಿ ಅವರ ಜೊತೆ ಜೊತೆಗೆ ಸಾಮಾಜಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಅನುಭವ ಮಂಟಪದಲ್ಲಿ ಬಸವಣ್ಣನವರ ಕಾರ್ಯದರ್ಶಿಯಾಗಿ ಕಾಯಕಕ್ಕೆ ಯಾವ ಚ್ಯುತಿ ಬರದಂತೆ ಸೇವೆ ಮಾಡಿ ಅವರ ಮೆಚ್ಚುಗೆ ಪಡೆದರು ಅನುಭವ ಮಂಟಪಕ್ಕೆ ಯಾರೇ ಬಂದರೂ ಹಡಪದ ಅಪ್ಪಣ್ಣ ಅವರನ್ನು ಭೇಟಿ ಮಾಡಿ ಬರುವಂತೆ ಹೇಳುತ್ತಿದ್ದರು ತಮ್ಮ ವಚನಗಳ ಮೂಲಕ ಸಮಾಜದ ಮೌಢ್ಯತೆಯನ್ನು ಕಂದಾಚಾರಣೆಗಳನ್ನು, ಅನಿಷ್ಟ ಪದ್ಧತಿಗಳನ್ನು ಜನರ ಮನಸ್ಸಿನಿಂದ ದೂರ ಮಾಡುವ ಪ್ರಯತ್ನ ಮಾಡಿದರು ಅವರ ವಿಚಾರಗಳು ಇವತ್ತಿನ ಸಮಾಜಕ್ಕೆ ಪ್ರಸ್ತುತ ಜೀವಪರ ಕಾಳಜಿ ಹೊಂದಿದ್ದ ಶರಣರು ನಮ್ಮೆಲ್ಲರಿಗೂ ಆದರ್ಶ ಎಂದು ಹೇಳಿದರು.ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿದರು ಹಡಪದ ಸಮಾಜದ ಪ್ರಮುಖರಾದ ಶಂಕರ ಹಡಪದ
ಮಹಾದೇವ ಹಡಪದ,ರಾಮಚಂದ್ರ ಹಡಪದ,ಬಸವರಾಜ ಹಡಪದ,
ಶಿವರಾಜ ಹಡಪದ ,
ಅಣ್ಣೆಪ್ಪ ಹಡಪದ,ಮಲ್ಲಿಕಾರ್ಜುನ ಹಡಪದ,ಬಾಗಣ್ಣ ಹಡಪದ,ಸಿದ್ದಣ್ಣ ಹಡಪದ,
ನಿಂಗಣ್ಣ ಹಡಪದ,ಸೋಮಶೇಖರ ಸೂಲಹಳ್ಳಿ, ಸೋಮಶೇಖರ್ ಬಾಳಿ ,ದತ್ತು ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ-ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ