ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡಿಗರಿಗೆ ಮೀಸಲಾತಿ ನೀಡಲು ದೇವಿಂದ್ರ ತಳವಾರ ಸರ್ಕಾರಕ್ಕೆ ಆಗ್ರಹ

̊
ಜೇವರ್ಗಿ:ರಾಜ್ಯ ಸರಕಾರವು ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಸಿ ಮತ್ತು ಡಿ ಗ್ರೂಪ್ ಹುದ್ದೆಗಳಲ್ಲಿ ಮೀಸಲಿಡಬೇಕು ಮುಖ್ಯಮತ್ರಿ ಸಿದ್ದರಾಮಯ್ಯನವರು ಈ ನಿರ್ಣಯದಿಂದ ಹಿಂದೆ ಸರಿಯಬಾರದೆಂದು ಕಲ್ಯಾಣ ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ದೇವಿಂದ್ರ ಈ ತಳವಾರ ರಾಜ್ಯ ಸರಕಾರಕ್ಕೆ ಪತ್ರಿಕೆ ಹೇಳಿಕೆ ಮೂಲಕ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.ರಾಜ್ಯದ ಜನರ ಹಿತದೃಷ್ಟಿಯಿಂದ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ನಿಟ್ಟಿನಲ್ಲಿ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡಿದರೆ ರಾಜ್ಯದ ಯುವಕರ ಬಾಳಿಗೆ ತಮ್ಮ ಸರಕಾರ ಅವರ ಬದುಕಿಗೆ ಬೆಳಕಾಗುತ್ತದೆ ಸಾವಿರಾರು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತವೆ.ರಾಜ್ಯದ ಮುಖ್ಯ ಮಂತ್ರಿಗಳು ಯಾರ ಒತ್ತಡಕ್ಕೂ ಮಣಿಯದೇ ಶೀಘ್ರವೇ ಮೀಸಲಾತಿ ಪ್ರಕಟಿಸಬೇಕೆಂದು ಕಲ್ಯಾಣ ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದೇವಿಂದ್ರ ಈ ತಳವಾರ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.ಈ ವಿಚಾರದಲ್ಲಿ ಸರಕಾರ ನಿರ್ಲಕ್ಷವಹಿಸಿದರೆ ರಾಜ್ಯದಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ