ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಟ್ಟೂರಿನಲ್ಲಿ ಪ್ರಥಮ ಬಾರಿಗೆ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಹಸಿರು ಹೊನಲು ತಂಡದ ವತಿಯಿಂದ ಕ್ರಿಕೆಟ್ ಪಂದ್ಯ

ವಿಜಯನಗರ/ಕೊಟ್ಟೂರು:ಕರ್ನಾಟಕ ಪತ್ರಕರ್ತರ ಸಂಘ ಮತ್ತು ಹಸಿರು ಹೊನಲು ತಂಡದಿಂದ ಭಾನುವಾರ ತಾಲೂಕು ಕೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯಿತು. ಕರ್ನಾಟಕ ಪತ್ರಕರ್ತರ ಸಂಘ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪರಿಣಾಮವಾಗಿ ಹಸಿರು ಹೊನಲು ತಂಡ ನಿಗದಿತ ೧೦ ಓವರ್‌ಗಳಲ್ಲಿ ೮೪ ರನ್ ಗಳಿಸಿ ಬೃಹತ್ ಮೊತ್ತ ಪೇರಿಸಿದರು. ಇದಕ್ಕೆ ಉತ್ತರವಾಗಿ ಕರ್ನಾಟಕ ಪತ್ರಕರ್ತರ ಸಂಘವೂ ಸಹ ೧೦ ಓವರ್‌ಗಳಲ್ಲಿ ೮೪ ರನ್ ಗಳಿಸಿದ ಪರಿಣಾಮ ಪಂದ್ಯ ಟೈ ನಲ್ಲಿ ಮುಕ್ತಾವಾಯಿತು. ದಶಕಗಳ ನಂತರ ಬ್ಯಾಟ್ ಹಿಡಿದ ಎರಡೂ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿದವು. ಪಂದ್ಯ ಮುಗಿದ ಬಳಿಕ ಹಸಿರು ಹೊನಲು ತಂಡದ ನಾಗರಾಜ್ ಬಂಜಾರ್ ಮತ್ತು ಕರ್ನಾಟಕ ಪತ್ರಕರ್ತರ ಸಂಘದ ಚಿರಿಬಿ ಕೊಟ್ರೇಶ್ ಮಾತನಾಡುತ್ತ, ಇದೊಂದು ಸ್ನೇಹದ ಮ್ಯಾಚ್ ಎಂದು ಹೇಳಿದರು. ಕ್ರೀಡೆಯಲ್ಲಿ ಭಾಗವಹಿಸುವುದರ ಮೂಲಕ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೆ ಕೊಟ್ರೇಶ್ ಅವರು ಹಸಿರು ಹೊನಲು ತಂಡದವರಿಗೆ ಜುಲೈ 6 ನೆಡೆದ ಪತ್ರಿಕಾ ದಿನಾಚರಣೆ ನಿಮಿತ್ತ ಸನ್ಮಾನ ಮಾಡಲಾಯಿತು.

ವರದಿ: ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ