ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಈಚನೂರು ಕುಮಾರ್ ನಿಧನಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ

ಮೈಸೂರು ಜಿಲ್ಲೆಯ ಖ್ಯಾತ ಸಾಹಿತಿ,ಪತ್ರಕರ್ತರಾದ ಈಚನೂರು ಕುಮಾರ್ ನಿಧನಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಈಚನೂರು ಕುಮಾ‌ರ್ ಅವರ ನಿಧನ ಪತ್ರಿಕಾರಂಗಕ್ಕೆ
ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈಚನೂರು ಕುಮಾರ್ ಅವರು ಭಾರತ ಸಂವಿಧಾನ ಕುರಿತು ವಿಶೇಷ ಲೇಖನಗಳನ್ನು ರಚಿಸಿದ್ದಾರೆ, ಇವರು ಪ್ರಜಾವಾಣಿ,ನವಧ್ವನಿ, ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂ‌ರ್, ಕನ್ನಡ ಪ್ರಭ, ಮಹಾನಂದಿ,ಮೈಸೂರು ಪತ್ರಿಕೆ, ಪ್ರಜಾನುಡಿ, ಡೆಕ್ಕನ್ ನ್ಯೂಸ್ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದರು.

ಅಲ್ಲದೆ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ
ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು,ಅವರು ಸಮಾಜಕ್ಕೆ ಸಲ್ಲಿಸಿದ ಸೇವೆ ಪ್ರಶಂಸನೀಯವಾದುದು.
ಮೈಸೂರು ರಾಜಮನೆತನದ ಇತಿಹಾಸವನ್ನು ಜನತೆಗೆ ತಿಳಿಸಿದ ಕೀರ್ತಿ ಈಚನೂರು ಕುಮಾರ್ ಅವರಿಗೆ ಸಲ್ಲುತ್ತದೆ ಎಂದು ತೇಜಸ್ವಿ ಬಣ್ಣಿಸಿದ್ದಾರೆ.

ಇತಿಹಾಸಕಾರರಾದ ಈಚನೂರು
ಕುಮಾರ್‌ ಅವರ ನಿಧನದಿಂದ ಅವರ ಕುಟುಂಬದವರು, ಅಭಿಮಾನಿಗಳಿಗೆ
ಆಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು
ಭಗವಂತನ್ನು ದಯಪಾಲಿಸಲೆಂದು
ಪ್ರಾರ್ಥಿಸುತ್ತೇನೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ