ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಸರ್ವಕಾಲಿಕ ಶ್ರೇಷ್ಠ:ಚಾಪೇಲ್

ಯಾದಗಿರಿ/ವಡಗೇರಾ:ಶಿವಶರಣ ಹಡಪದ ಅಪ್ಪಣ್ಣನವರು ಕಾಯಕ ಜೀವಿಯಾಗಿದ್ದರು, ಅವರ ಕಾಯಕನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು ಎಂದು ತಹಶೀಲದಾರ ಶ್ರೀನಿವಾಸ ಚಾಪೆಲ್ ನುಡಿದರು‌.ವಡಗೇರಾ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಶಿವಶರಣ ಹಡಪದ ಅಪ್ಪಣ್ಣನವರು ಒಂದೇ ಜಾತಿಗೆ ಸೀಮಿತವಾಗದೆ ಸಮಾಜದ ಒಳಿತಿಗಾಗಿ ಶ್ರಮಿಸಿದಂತ ಮಹಾನ್ ಶರಣರು ಅವರ ತತ್ವ ಆದರ್ಶಗಳು ಇಂದಿಗೂ ಕೂಡಾ ಸರ್ವಕಾಲಿಕ ಶ್ರೇಷ್ಠ ಎಂದು ಹೇಳಿದರು.ಈ ಸಂದರ್ಭದಲ್ಲಿ ಉಪ ತಹಶೀಲ್ದಾರ ಸಂಗಮೇಶ್ ದೇಸಾಯಿ, ಕಂದಾಯ ನಿರೀಕ್ಷಕರಾದ ಸಂಜಿವ್ ಕುಮಾರ್ ಕಾವಲಿ,ರಾಮನಗೌಡ ಯಕ್ಷಿಂತಿ ,ಗುರು ಚೌಕಿಮಠ, ಸಮಾಜದ ಮುಖಂಡರಾದ ಅಮರೇಶ ಹಡಪದ ,ಸಂಗಮೇಶ ಹಡಪದ,ಚಂದ್ರಶೇಖರ ಹಡಪದ,ಕಮಲಾಕರ ಹಡಪದ,ಬಸವರಾಜ ಕೊಡ್ಡದೋರ,
ನಾಗರಾಜ ಹಡಪದ, ಸಂಗಮೇಶ ಹಡಪದ ಮತ್ತು ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳಾದ ಸುನಿತಾ ಹೇರುಂಡಿ, ದೇವು ನಾಯಕ್, ಖಂಡಪ್ಪ ಮೈಲಾಪುರ್, ಮಂಜು ಯಾದಗಿರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್, ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ