ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ : ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿ ಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು ನೋವು ಉಂಟಾಗುತ್ತಿವೆ.ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಾಗೃತಿ ಅಭಿಯಾನಗಳನ್ನು ನಡೆಸಿ ಅಪಘಾತ ಪ್ರಕರಣ ನಿಯಂತ್ರಕ್ಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ರಸ್ತೆಗಳಲ್ಲಿ ಅನಗತ್ಯವಾಗಿ ಹಾಕಿರುವ ಹಂಪ್‌ಗಳನ್ನು ತೆರವುಗೊಳಿಸಬೇಕು.ನಗರದಲ್ಲಿನ ಮುಖ್ಯ ವೃತ್ತಗಳು ಸೇರಿದಂತೆ ಮುಖ್ಯರಸ್ತೆ ಮಧ್ಯದಲ್ಲಿರುವ ರಸ್ತೆ ಗುಂಡಿಗಳ ದುರಸ್ತಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು.ವೇಗಮಿತಿ ತಪಾಸಣೆ ಕಾರ್ಯ ಕ್ರಮಬದ್ಧವಾಗಿ ನಡೆಸಬೇಕು ಎಂದು ಸೂಚಿಸಿದರು.

ಅಪಘಾತ ವಿಭಜಕಗಳು,ಬ್ಯಾನರ್‌ಗಳನ್ನು ನಿಯಮಾನುಸಾರ ಅಳವಡಿಸಲು ಕ್ರಮ ಕೈಗೊಳ್ಳಬೇಕು.ಅವಧಿ ಪೂರ್ಣಗೊಂಡ ವಾಹನಗಳು ಸಂಚರಿಸದAತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಶಾಲೆ ವಾಹನಗಳು ಸುಸ್ಥಿತಿಯಲ್ಲಿರಬೇಕು. ಅನುಭವಿ ವಾಹನ ಚಾಲಕರನ್ನು ನಿಯೋಜಿಸಿಕೊಳ್ಳಬೇಕು. ಶಾಲೆ ವಾಹನದಲ್ಲಿ ಕಡ್ಡಾಯವಾಗಿ ಶಾಲೆ ಸಿಬ್ಬಂದಿ ನಿಯೋಜಿಸಬೇಕು ಎಂದರು.

ಸಾರ್ವಜನಿಕರು ಸಂಚಾರಿ ನಿಯಮ ಪಾಲಿಸಿಬೇಕು ಜಿಲ್ಲಾಧಿಕಾರಿ :ಜಿಲ್ಲೆಯ ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜಿಲ್ಲಾ ಸಾರಿಗೆ ಪ್ರಾಧಿಕಾರ ಸೂಚಿಸಿರುವ ವೇಗ ಮಿತಿಯಲ್ಲಿ ಸಂಚರಿಸಬೇಕು.ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.ಅಂತಹ ಸ್ಥಳಗಳಲ್ಲಿ ನಿಧಾನವಾಗಿ ಹಾಗೂ ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು.ಇಲ್ಲದಿದ್ದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾಗಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಸ್ತೆ ಮೇಲೆ ಬಿಡಾಡಿ ದನಗಳನ್ನು ಬಿಡಬೇಡಿ ಜಿಲ್ಲಾಧಿಕಾರಿ ನಗರಗಳಲ್ಲಿ ಬಿಡಾಡಿ ದನಗಳು ರಸ್ತೆಗಳಲ್ಲಿ ತಿರುಗಾಡುತ್ತಿದ್ದು, ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಬಿಡಾಡಿ ದನಗಳ ಕಾರಣದಿಂದ ಸಾಕಷ್ಟು ಬೈಕ್ ಸವಾರರು, ಆಟೊ, ಕಾರ್ ಚಾಲಕರು ದನಗಳಿಂದ ನಿಯಂತ್ರಣ ತಪ್ಪಿ ಅಪಘಾತವಾಗಿ ಸಾವು ನೋವುಗಳಾಗಿವೆ. ದನಗಳು ಒಂದಕ್ಕೊಂದು ಜಗಳವಾಡುವಾಗ ಪಾದಚಾರಿಗಳಿಗೆ ಡಿಕ್ಕಿಯಾಗಿ ಗಾಯಗೊಂಡ ಪ್ರಕರಣಗಳು ಆಗುತ್ತಿವೆ.

 ಎಲ್ಲಾ ದನಗಳ ವಾರಸುದಾರರು ತಮ್ಮ ದನಗಳನ್ನು ರಸ್ತೆಗೆ ಬರದಂತೆ ಮನೆಯಲ್ಲಿ ಕಟ್ಟಿಹಾಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮಾಲೀಕರು ಇಲ್ಲದ ಜಾನುವಾರುಗಳನ್ನು ಸಂಬಂಧಿಸಿದ ಅಧಿಕಾರಿಗಳು ವಶಕ್ಕೆ ಪಡೆದು ಗೋಶಾಲೆಗೆ ಸಾಗಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.

 ಈ ಸಂದರ್ಭದಲ್ಲಿ ವಲಯ ಅರಣ್ಯ ಉಪ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಅಭಿಮನ್ಯು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದಕುಮಾರ ಎಸ್ ಎಸ್ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ