ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಂಕಲಗಾ ಗ್ರಾಮದ ಸಿಸಿ ರಸ್ತೆ ಮೇಲೆ ಗಿಡಗಳನ್ನು ಹಚ್ಚಿದ ರೈತ ಸಂಘದ ತಾಲೂಕ ಅಧ್ಯಕ್ಷ ಮೌನೇಶ ಭಂಕಲಗಾ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಾತನೂರು ಗ್ರಾ.ಪಂ ವ್ಯಾಪ್ತಿಯ ಭಂಕಲಗಾ ಗ್ರಾಮದ ರಸ್ತೆಗಳು ಸಂಪೂರ್ಣ ಕೆಸರು ಗದ್ದೆಯಾಗಿವೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಮೌನೇಶ ಭಂಕಲಗಾ ಅವರು ಆರೋಪಿಸಿದರು.
ಭಂಕಲಗಾ ಗ್ರಾಮದಲ್ಲಿ ಕೆಸರು ಗದ್ದೆಯಾದ ರಸ್ತೆಯ ಮೇಲೆ ಗಿಡಗಳನ್ನು ಹಚ್ಚಿ ಮಾತನಾಡಿದ ಅವರು, ಗ್ರಾಮದ ರಸ್ತೆಗಳು ಕೆಸರು ಗದ್ದೆಯಾಗಿರುವುದರಿಂದ ರಸ್ತೆ ಮೇಲೆ ಗ್ರಾಮಸ್ಥರು,ವಾಹನ ಸವಾರರು ಹಾಗೂ ದನ ಕರುಗಳು ಸಂಚರಿಸದಂತಾಗಿದೆ. ಹೀಗಾಗಿ ಕೂಡಲೇ ಗ್ರಾ.ಪಂ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.
ನಂತರ ಕೆಸರು ಗದ್ದೆಯಂತಾಗಿರುವ ರಸ್ತೆಯ ಮೇಲೆ ನೇಗಿಲು ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ